Advertisement
ಅನುಕ್ರಮ

2022 | ಹೊಸವರ್ಷದ ಶುಭಾಶಯಗಳು | ಸಂತಸದತ್ತ ಮುಖಮಾಡೋಣ |

Share

ಡಿಸೆಂಬರ್ ಬರುತ್ತಿದ್ದಂತೆ ಬೀದಿ ಬೀದಿಗಳು ಕಳೆಗಟ್ಟುವುದು, ವಿದ್ಯುತ್ ದೀಪಗಳಿಂದ ಅಲಂಕರಿಸ್ಪಡುವುದು, ಸುಂದರವಾದ ಕ್ರಿಸ್ ಮಸ್ ಟ್ರೀ ಗಳು, ತಯಾರಿ ಹಂತದಲ್ಲಿರುವ ನಮೂನೆವಾರು ಕೇಕ್ ಗಳು . ಪ್ರತಿ ವರ್ಷ ಡಿಸೆಂಬರ್ ಇಪ್ಪತೈದರ ಕ್ರಿಸ್ಮಸ್ ಹಬ್ಬ ಮುಗಿಯುವುದು ಜನವರಿ ಒಂದರ ಆರಂಭದೊಂದಿಗೆ.

ವರ್ಷದ ಕೊನೆಯ ತಿಂಗಳು ಆರಂಭವಾತ್ತಿರುವಂತೆ ವಿದೇಶದಲ್ಲಿ ನೆಲೆಸಿರುವ ಬಂಧು ಬಳಗ, ಮಿತ್ರರು ಕಳುಹಿಸುವ ಅಲ್ಲಿನ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಒಂದೊಂದು ಕಡೆ ಒಂದೊಂದು ಬಗೆಯ ಆಚರಣೆ. ಕ್ಯಾಲೆಂಡರ್ ವರ್ಷಾಚರಣೆಗೆ ಇತ್ತೀಚೆಗೆ ನಮ್ಮಲ್ಲೂ ಬಹಳ ಸಂಭ್ರಮ ಪಡುತ್ತೇವೆ. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವುದು , ಉಡುಗೊರೆ ಕೊಡುವುದು, ಚಾಕಲೇಟ್, ಸಿಹಿ ಹಂಚುವುದು ಎಲ್ಲಾ ಇದ್ದದ್ದೇ ಅಲ್ಲವೇ . ಇವಕ್ಕೆ ಒಂದು ಕಾರಣ ಬೇಕಷ್ಟೇ!2020 ಹಾಗೂ 2021 ಬಹಳ ನೆನಪಿನಲ್ಲಿ ಉಳಿಯುವ ವರ್ಷಗಳು. ಖುಷಿಯ ವಿಚಾರಕ್ಕಿಂತ ದುರಂತ ವರ್ಷಗಳೇ ಅನ್ನಬಹುದು.

ಅಲ್ಲಾ ಬದಲಾವಣೆ ಜಗದ ನಿಯಮ ಸರಿ, ಆದರೆ ಈ ಪರಿಯ ಬದಲಾವಣೆ?!?!.. ನೈಸರ್ಗಿಕ ಅವಘಡಗಳು ನಿತ್ಯವೆಂಬಂತೆ ನಡೆಯುತ್ತಿವೆ. ಮಳೆಯ ಸ್ವರೂಪ ಬದಲಾಗುತ್ತಿದೆ. ಪರಿಸರದಲ್ಲಿನ ಕಾಯಿಲೆಗಳ ತೀವ್ರತೆ , ಬಾಧಿಸುವ ವ್ಯಾಪ್ತಿ ದಿನದಿಂದ ದಿನಕ್ಕೆ ಬೇರೆ ಬೇರೆಯೇ. ಒಬ್ಬನಿಂದ ಇನ್ನೊಬ್ಬನಿಗೆ ಹರಡುವ , ಆಮೇಲಿನ ಪ್ರಭಾವ ಎಲ್ಲವೂ ವಿಭಿನ್ನ. ಎಲ್ಲವೂ ಆಯೋಮಯವೆನಿಸುತ್ತಿದೆ. ಈ ಕಷ್ಟ, ಸಂಕಷ್ಟ, ಬೇಸರಿಕೆ,ನೋವು ,ನಷ್ಟಗಳ ಭಾವನೆಗಳೆಲ್ಲವನ್ನು ಒಂದು ಗಂಟು ಮಾಡಿ ಬದಿಯಲ್ಲಿರಿಸೋಣ. ಮನಸನ್ನು ಹೊಸ ವರುಷದ ಸ್ವಾಗತಕ್ಕೆ ಸಿದ್ಧಗೊಳಿಸೋಣ.

2022 ದೇಶಕ್ಕೆ ಹಿತವನ್ನೇ ನೀಡಲಿ. ಅಭಿವೃದ್ಧಿಯ ಪಥದಲ್ಲಿ ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯಲಿ. ಮನಸಿನ ಸ್ವಾರ್ಥ, ಲೋಭ, ಹೊಟ್ಟೆಗಿಚ್ಚು ಬದಿಗಿಟ್ಟು ದೇಶಹಿತವೇ ಮುಖ್ಯವಾಗಲಿ . ಉಲ್ಲಾಸಕರವಾಗಿ ಮನಮನದಲ್ಲಿ ಸಂತಸವೇ ತುಂಬಿರಲಿ.‌ ಹೊಸ ವರುಷದ ಶುಭಾಶಯಗಳು.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

2 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

2 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

18 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago