Advertisement
ಅನುಕ್ರಮ

2022 | ಹೊಸವರ್ಷದ ಶುಭಾಶಯಗಳು | ಸಂತಸದತ್ತ ಮುಖಮಾಡೋಣ |

Share

ಡಿಸೆಂಬರ್ ಬರುತ್ತಿದ್ದಂತೆ ಬೀದಿ ಬೀದಿಗಳು ಕಳೆಗಟ್ಟುವುದು, ವಿದ್ಯುತ್ ದೀಪಗಳಿಂದ ಅಲಂಕರಿಸ್ಪಡುವುದು, ಸುಂದರವಾದ ಕ್ರಿಸ್ ಮಸ್ ಟ್ರೀ ಗಳು, ತಯಾರಿ ಹಂತದಲ್ಲಿರುವ ನಮೂನೆವಾರು ಕೇಕ್ ಗಳು . ಪ್ರತಿ ವರ್ಷ ಡಿಸೆಂಬರ್ ಇಪ್ಪತೈದರ ಕ್ರಿಸ್ಮಸ್ ಹಬ್ಬ ಮುಗಿಯುವುದು ಜನವರಿ ಒಂದರ ಆರಂಭದೊಂದಿಗೆ.

ವರ್ಷದ ಕೊನೆಯ ತಿಂಗಳು ಆರಂಭವಾತ್ತಿರುವಂತೆ ವಿದೇಶದಲ್ಲಿ ನೆಲೆಸಿರುವ ಬಂಧು ಬಳಗ, ಮಿತ್ರರು ಕಳುಹಿಸುವ ಅಲ್ಲಿನ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಒಂದೊಂದು ಕಡೆ ಒಂದೊಂದು ಬಗೆಯ ಆಚರಣೆ. ಕ್ಯಾಲೆಂಡರ್ ವರ್ಷಾಚರಣೆಗೆ ಇತ್ತೀಚೆಗೆ ನಮ್ಮಲ್ಲೂ ಬಹಳ ಸಂಭ್ರಮ ಪಡುತ್ತೇವೆ. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವುದು , ಉಡುಗೊರೆ ಕೊಡುವುದು, ಚಾಕಲೇಟ್, ಸಿಹಿ ಹಂಚುವುದು ಎಲ್ಲಾ ಇದ್ದದ್ದೇ ಅಲ್ಲವೇ . ಇವಕ್ಕೆ ಒಂದು ಕಾರಣ ಬೇಕಷ್ಟೇ!2020 ಹಾಗೂ 2021 ಬಹಳ ನೆನಪಿನಲ್ಲಿ ಉಳಿಯುವ ವರ್ಷಗಳು. ಖುಷಿಯ ವಿಚಾರಕ್ಕಿಂತ ದುರಂತ ವರ್ಷಗಳೇ ಅನ್ನಬಹುದು.

ಅಲ್ಲಾ ಬದಲಾವಣೆ ಜಗದ ನಿಯಮ ಸರಿ, ಆದರೆ ಈ ಪರಿಯ ಬದಲಾವಣೆ?!?!.. ನೈಸರ್ಗಿಕ ಅವಘಡಗಳು ನಿತ್ಯವೆಂಬಂತೆ ನಡೆಯುತ್ತಿವೆ. ಮಳೆಯ ಸ್ವರೂಪ ಬದಲಾಗುತ್ತಿದೆ. ಪರಿಸರದಲ್ಲಿನ ಕಾಯಿಲೆಗಳ ತೀವ್ರತೆ , ಬಾಧಿಸುವ ವ್ಯಾಪ್ತಿ ದಿನದಿಂದ ದಿನಕ್ಕೆ ಬೇರೆ ಬೇರೆಯೇ. ಒಬ್ಬನಿಂದ ಇನ್ನೊಬ್ಬನಿಗೆ ಹರಡುವ , ಆಮೇಲಿನ ಪ್ರಭಾವ ಎಲ್ಲವೂ ವಿಭಿನ್ನ. ಎಲ್ಲವೂ ಆಯೋಮಯವೆನಿಸುತ್ತಿದೆ. ಈ ಕಷ್ಟ, ಸಂಕಷ್ಟ, ಬೇಸರಿಕೆ,ನೋವು ,ನಷ್ಟಗಳ ಭಾವನೆಗಳೆಲ್ಲವನ್ನು ಒಂದು ಗಂಟು ಮಾಡಿ ಬದಿಯಲ್ಲಿರಿಸೋಣ. ಮನಸನ್ನು ಹೊಸ ವರುಷದ ಸ್ವಾಗತಕ್ಕೆ ಸಿದ್ಧಗೊಳಿಸೋಣ.

2022 ದೇಶಕ್ಕೆ ಹಿತವನ್ನೇ ನೀಡಲಿ. ಅಭಿವೃದ್ಧಿಯ ಪಥದಲ್ಲಿ ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯಲಿ. ಮನಸಿನ ಸ್ವಾರ್ಥ, ಲೋಭ, ಹೊಟ್ಟೆಗಿಚ್ಚು ಬದಿಗಿಟ್ಟು ದೇಶಹಿತವೇ ಮುಖ್ಯವಾಗಲಿ . ಉಲ್ಲಾಸಕರವಾಗಿ ಮನಮನದಲ್ಲಿ ಸಂತಸವೇ ತುಂಬಿರಲಿ.‌ ಹೊಸ ವರುಷದ ಶುಭಾಶಯಗಳು.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago