Advertisement
ಅನುಕ್ರಮ

2022 | ಹೊಸವರ್ಷದ ಶುಭಾಶಯಗಳು | ಸಂತಸದತ್ತ ಮುಖಮಾಡೋಣ |

Share

ಡಿಸೆಂಬರ್ ಬರುತ್ತಿದ್ದಂತೆ ಬೀದಿ ಬೀದಿಗಳು ಕಳೆಗಟ್ಟುವುದು, ವಿದ್ಯುತ್ ದೀಪಗಳಿಂದ ಅಲಂಕರಿಸ್ಪಡುವುದು, ಸುಂದರವಾದ ಕ್ರಿಸ್ ಮಸ್ ಟ್ರೀ ಗಳು, ತಯಾರಿ ಹಂತದಲ್ಲಿರುವ ನಮೂನೆವಾರು ಕೇಕ್ ಗಳು . ಪ್ರತಿ ವರ್ಷ ಡಿಸೆಂಬರ್ ಇಪ್ಪತೈದರ ಕ್ರಿಸ್ಮಸ್ ಹಬ್ಬ ಮುಗಿಯುವುದು ಜನವರಿ ಒಂದರ ಆರಂಭದೊಂದಿಗೆ.

ವರ್ಷದ ಕೊನೆಯ ತಿಂಗಳು ಆರಂಭವಾತ್ತಿರುವಂತೆ ವಿದೇಶದಲ್ಲಿ ನೆಲೆಸಿರುವ ಬಂಧು ಬಳಗ, ಮಿತ್ರರು ಕಳುಹಿಸುವ ಅಲ್ಲಿನ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಒಂದೊಂದು ಕಡೆ ಒಂದೊಂದು ಬಗೆಯ ಆಚರಣೆ. ಕ್ಯಾಲೆಂಡರ್ ವರ್ಷಾಚರಣೆಗೆ ಇತ್ತೀಚೆಗೆ ನಮ್ಮಲ್ಲೂ ಬಹಳ ಸಂಭ್ರಮ ಪಡುತ್ತೇವೆ. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವುದು , ಉಡುಗೊರೆ ಕೊಡುವುದು, ಚಾಕಲೇಟ್, ಸಿಹಿ ಹಂಚುವುದು ಎಲ್ಲಾ ಇದ್ದದ್ದೇ ಅಲ್ಲವೇ . ಇವಕ್ಕೆ ಒಂದು ಕಾರಣ ಬೇಕಷ್ಟೇ!2020 ಹಾಗೂ 2021 ಬಹಳ ನೆನಪಿನಲ್ಲಿ ಉಳಿಯುವ ವರ್ಷಗಳು. ಖುಷಿಯ ವಿಚಾರಕ್ಕಿಂತ ದುರಂತ ವರ್ಷಗಳೇ ಅನ್ನಬಹುದು.

ಅಲ್ಲಾ ಬದಲಾವಣೆ ಜಗದ ನಿಯಮ ಸರಿ, ಆದರೆ ಈ ಪರಿಯ ಬದಲಾವಣೆ?!?!.. ನೈಸರ್ಗಿಕ ಅವಘಡಗಳು ನಿತ್ಯವೆಂಬಂತೆ ನಡೆಯುತ್ತಿವೆ. ಮಳೆಯ ಸ್ವರೂಪ ಬದಲಾಗುತ್ತಿದೆ. ಪರಿಸರದಲ್ಲಿನ ಕಾಯಿಲೆಗಳ ತೀವ್ರತೆ , ಬಾಧಿಸುವ ವ್ಯಾಪ್ತಿ ದಿನದಿಂದ ದಿನಕ್ಕೆ ಬೇರೆ ಬೇರೆಯೇ. ಒಬ್ಬನಿಂದ ಇನ್ನೊಬ್ಬನಿಗೆ ಹರಡುವ , ಆಮೇಲಿನ ಪ್ರಭಾವ ಎಲ್ಲವೂ ವಿಭಿನ್ನ. ಎಲ್ಲವೂ ಆಯೋಮಯವೆನಿಸುತ್ತಿದೆ. ಈ ಕಷ್ಟ, ಸಂಕಷ್ಟ, ಬೇಸರಿಕೆ,ನೋವು ,ನಷ್ಟಗಳ ಭಾವನೆಗಳೆಲ್ಲವನ್ನು ಒಂದು ಗಂಟು ಮಾಡಿ ಬದಿಯಲ್ಲಿರಿಸೋಣ. ಮನಸನ್ನು ಹೊಸ ವರುಷದ ಸ್ವಾಗತಕ್ಕೆ ಸಿದ್ಧಗೊಳಿಸೋಣ.

2022 ದೇಶಕ್ಕೆ ಹಿತವನ್ನೇ ನೀಡಲಿ. ಅಭಿವೃದ್ಧಿಯ ಪಥದಲ್ಲಿ ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯಲಿ. ಮನಸಿನ ಸ್ವಾರ್ಥ, ಲೋಭ, ಹೊಟ್ಟೆಗಿಚ್ಚು ಬದಿಗಿಟ್ಟು ದೇಶಹಿತವೇ ಮುಖ್ಯವಾಗಲಿ . ಉಲ್ಲಾಸಕರವಾಗಿ ಮನಮನದಲ್ಲಿ ಸಂತಸವೇ ತುಂಬಿರಲಿ.‌ ಹೊಸ ವರುಷದ ಶುಭಾಶಯಗಳು.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

2 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

3 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

11 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

11 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago