ಹೊಸ ವರ್ಷಾರಣೆಯ ಸಂದರ್ಭದಲ್ಲಿ ಬೆಂಗಳೂರಿನ ಬಿಬಿಎಂಪಿ ಪೂರ್ವ ವಲಯದ ಮಹಾತ್ಮಗಾಂಧಿ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ನೇತೃತ್ವದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ. ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ತ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3 ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ7 ವೇಳೆಗೆ ಪೂರ್ಣಗೊಳಿಸಲಾಗಿದೆ. ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. 70 ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…