2020 ರ ಆರಂಭದಲ್ಲೇ ಶುರುವಾದ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಯಿತು. ವುಹಾನ್ ನಲ್ಲಿ ಆರಂಭವಾದ ಕೋವಿಡ್ ಕೆಲವೇ ದಿನಗಳಲ್ಲಿ ಪ್ರಪಂಚದೆಲ್ಲೆಡೆ ವ್ಯಾಪಿಸಿತು. ಕಂಡು ಕೇಳರಿಯದ ಪರಿಣಾಮಗಳನ್ನು ಎದುರಿಸಬೇಕಾಯಿತು. ಅನಿರೀಕ್ಷಿತ ಪರಿಸ್ಥಿತಿ.
ಮನುಜನ ದುರಾಸೆ ಹೆಚ್ಚಾಯಿತೋ, ಪ್ರಕೃತಿ ಬದಲಾವಣೆ ಬಯಸಿತೋ ಅರಿಯದು. ಬದುಕಿನ ಏಕತಾನತೆಯಿಂದ ಬೇಸತ್ತವರು ಒಂದು ಬದಲಾವಣೆ ಬಯಸಿದರು. ಕೊರೊನಾ ಬಂದು ಎಲ್ಲವನ್ನೂ ಬದಲಿಸಿ ಬಿಟ್ಟಿತು. 2020 ಯಾರು ಕೂಡ ಮರೆಯಲಾರದ ವರ್ಷವೆಂದೇ ದಾಖಲಾಯಿತು.
ಬದಲಾದ ಜೀವನ ಶೈಲಿಗೆ ಒಗ್ಗಿಕೊಂಡ ಜನತೆ 2021 ನ್ನು ಹೊಸ ನಿರೀಕ್ಷೆಯೊಂದಿಗೆ ಸ್ವಾಗತಿಸಲು ಸಜ್ಜಾಗಿಯಾಗಿದೆ. ಇಂದಿನ ಜನರ ಆಯ್ಕೆಗಳು, ಆದ್ಯತೆಗಳು ಬದಲಾಗಿವೆ. ದುಬಾರಿ ಜೀವನ ಶೈಲಿಗಿಂತ, ಸರಳ ಆರೋಗ್ಯಕರ ಪರಿಸರವೇ ಮುಖ್ಯ ಆಯ್ಕೆಗಳಾಗಿವೆ. ಆಹಾರದ ವಿಷಯದಲ್ಲೂ ಮನೆ ಆಹಾರದತ್ತಲೇ ಒಲವು ಮೂಡಿದೆ. ಕಹಿ , ಒಗರು ಆದರೂ ಅಮ್ಮ ಮಾಡಿ ಕೊಡುವ ಕಷಾಯವೇ ಅಮೃತವಾಗಿದೆ.
ಹೊಸ ವರುಷದ ಹೊಸ್ತಿಲಲ್ಲಿ ನಿಂತಿದ್ದೇವೆ, ನವ ಕನಸುಗಳೊಂದಿಗೆ. ಒಳ್ಳೆಯ ಮನಸಿನಿಂದ, ಸುಂದರ ಕಲ್ಪನೆಗಳೊಂದಿಗೆ 2021ನೇಯ ವರ್ಷವನ್ನು ಸ್ವಾಗತಿಸೋಣ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.
ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…