MIRROR FOCUS

ಹೊಸವರ್ಷದ ನಿರೀಕ್ಷೆಗಳು ನಿಜವಾಗಲಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ರಿಸ್ಥಿತಿ ಬದಲಾಗಿದೆ, ಎಂದಿನಂತಿಲ್ಲ. ಹೊಸವರ್ಷದ ಸ್ವಾಗತಕ್ಕೆ ವಿಶೇಷ ತಯಾರಿಯೊಂದಿಗೆ ಸಿದ್ಧವಾಗುತ್ತಿದ್ದ ಮನಸುಗಳು ಸುಮ್ಮನಾಗಿವೆ. ನಿನ್ನೆ ಮೊನ್ನೆಯವರೆಗೆ ತಣ್ಣಗಾಗಿದ್ದ ಕೊರೊನಾ ಮತ್ತೆ ಹೊಸ ರೂಪದಲ್ಲಿ ಪತ್ತೆಯಾಗುವುದರೊಂದಿಗೆ ಸ್ವಲ್ಪವೇ ಗರಿಕೆದರಿದ್ದ ಉತ್ಸಾಹ ಅಲ್ಲಿಗೆ ಕಮರಿದೆ.
Advertisement
Advertisement

2020 ರ ಆರಂಭದಲ್ಲೇ ಶುರುವಾದ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಯಿತು. ವುಹಾನ್ ನಲ್ಲಿ ಆರಂಭವಾದ ಕೋವಿಡ್ ಕೆಲವೇ ದಿನಗಳಲ್ಲಿ ಪ್ರಪಂಚದೆಲ್ಲೆಡೆ ವ್ಯಾಪಿಸಿತು. ಕಂಡು ಕೇಳರಿಯದ ಪರಿಣಾಮಗಳನ್ನು ಎದುರಿಸಬೇಕಾಯಿತು. ಅನಿರೀಕ್ಷಿತ ಪರಿಸ್ಥಿತಿ.

ಮನುಜನ ದುರಾಸೆ ಹೆಚ್ಚಾಯಿತೋ, ಪ್ರಕೃತಿ ಬದಲಾವಣೆ ಬಯಸಿತೋ ಅರಿಯದು.‌ ಬದುಕಿನ ಏಕತಾನತೆಯಿಂದ ಬೇಸತ್ತವರು ಒಂದು ಬದಲಾವಣೆ ಬಯಸಿದರು‌‌. ಕೊರೊನಾ ಬಂದು ಎಲ್ಲವನ್ನೂ ಬದಲಿಸಿ ಬಿಟ್ಟಿತು. 2020 ಯಾರು ಕೂಡ ಮರೆಯಲಾರದ ವರ್ಷವೆಂದೇ ದಾಖಲಾಯಿತು.

ಬದಲಾದ ಜೀವನ ಶೈಲಿಗೆ ಒಗ್ಗಿಕೊಂಡ ಜನತೆ 2021 ನ್ನು ಹೊಸ ನಿರೀಕ್ಷೆಯೊಂದಿಗೆ ಸ್ವಾಗತಿಸಲು ಸಜ್ಜಾಗಿಯಾಗಿದೆ. ಇಂದಿನ ಜನರ ಆಯ್ಕೆಗಳು, ಆದ್ಯತೆಗಳು ಬದಲಾಗಿವೆ. ದುಬಾರಿ ಜೀವನ ಶೈಲಿಗಿಂತ, ಸರಳ ಆರೋಗ್ಯಕರ ಪರಿಸರವೇ ಮುಖ್ಯ ಆಯ್ಕೆಗಳಾಗಿವೆ. ಆಹಾರದ ವಿಷಯದಲ್ಲೂ ಮನೆ ಆಹಾರದತ್ತಲೇ ಒಲವು ಮೂಡಿದೆ. ಕಹಿ , ಒಗರು ಆದರೂ ಅಮ್ಮ ಮಾಡಿ ಕೊಡುವ ಕಷಾಯವೇ ಅಮೃತವಾಗಿದೆ.

ಹೊಸ ವರುಷದ ಹೊಸ್ತಿಲಲ್ಲಿ ನಿಂತಿದ್ದೇವೆ, ನವ ಕನಸುಗಳೊಂದಿಗೆ. ಒಳ್ಳೆಯ ಮನಸಿನಿಂದ, ಸುಂದರ ಕಲ್ಪನೆಗಳೊಂದಿಗೆ 2021ನೇಯ ವರ್ಷವನ್ನು ಸ್ವಾಗತಿಸೋಣ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.

Advertisement

ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

39 minutes ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

44 minutes ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

2 hours ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

10 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

11 hours ago