Advertisement
MIRROR FOCUS

ಹೊಸವರ್ಷದ ನಿರೀಕ್ಷೆಗಳು ನಿಜವಾಗಲಿ

Share
ರಿಸ್ಥಿತಿ ಬದಲಾಗಿದೆ, ಎಂದಿನಂತಿಲ್ಲ. ಹೊಸವರ್ಷದ ಸ್ವಾಗತಕ್ಕೆ ವಿಶೇಷ ತಯಾರಿಯೊಂದಿಗೆ ಸಿದ್ಧವಾಗುತ್ತಿದ್ದ ಮನಸುಗಳು ಸುಮ್ಮನಾಗಿವೆ. ನಿನ್ನೆ ಮೊನ್ನೆಯವರೆಗೆ ತಣ್ಣಗಾಗಿದ್ದ ಕೊರೊನಾ ಮತ್ತೆ ಹೊಸ ರೂಪದಲ್ಲಿ ಪತ್ತೆಯಾಗುವುದರೊಂದಿಗೆ ಸ್ವಲ್ಪವೇ ಗರಿಕೆದರಿದ್ದ ಉತ್ಸಾಹ ಅಲ್ಲಿಗೆ ಕಮರಿದೆ.

2020 ರ ಆರಂಭದಲ್ಲೇ ಶುರುವಾದ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಯಿತು. ವುಹಾನ್ ನಲ್ಲಿ ಆರಂಭವಾದ ಕೋವಿಡ್ ಕೆಲವೇ ದಿನಗಳಲ್ಲಿ ಪ್ರಪಂಚದೆಲ್ಲೆಡೆ ವ್ಯಾಪಿಸಿತು. ಕಂಡು ಕೇಳರಿಯದ ಪರಿಣಾಮಗಳನ್ನು ಎದುರಿಸಬೇಕಾಯಿತು. ಅನಿರೀಕ್ಷಿತ ಪರಿಸ್ಥಿತಿ.

ಮನುಜನ ದುರಾಸೆ ಹೆಚ್ಚಾಯಿತೋ, ಪ್ರಕೃತಿ ಬದಲಾವಣೆ ಬಯಸಿತೋ ಅರಿಯದು.‌ ಬದುಕಿನ ಏಕತಾನತೆಯಿಂದ ಬೇಸತ್ತವರು ಒಂದು ಬದಲಾವಣೆ ಬಯಸಿದರು‌‌. ಕೊರೊನಾ ಬಂದು ಎಲ್ಲವನ್ನೂ ಬದಲಿಸಿ ಬಿಟ್ಟಿತು. 2020 ಯಾರು ಕೂಡ ಮರೆಯಲಾರದ ವರ್ಷವೆಂದೇ ದಾಖಲಾಯಿತು.

ಬದಲಾದ ಜೀವನ ಶೈಲಿಗೆ ಒಗ್ಗಿಕೊಂಡ ಜನತೆ 2021 ನ್ನು ಹೊಸ ನಿರೀಕ್ಷೆಯೊಂದಿಗೆ ಸ್ವಾಗತಿಸಲು ಸಜ್ಜಾಗಿಯಾಗಿದೆ. ಇಂದಿನ ಜನರ ಆಯ್ಕೆಗಳು, ಆದ್ಯತೆಗಳು ಬದಲಾಗಿವೆ. ದುಬಾರಿ ಜೀವನ ಶೈಲಿಗಿಂತ, ಸರಳ ಆರೋಗ್ಯಕರ ಪರಿಸರವೇ ಮುಖ್ಯ ಆಯ್ಕೆಗಳಾಗಿವೆ. ಆಹಾರದ ವಿಷಯದಲ್ಲೂ ಮನೆ ಆಹಾರದತ್ತಲೇ ಒಲವು ಮೂಡಿದೆ. ಕಹಿ , ಒಗರು ಆದರೂ ಅಮ್ಮ ಮಾಡಿ ಕೊಡುವ ಕಷಾಯವೇ ಅಮೃತವಾಗಿದೆ.

ಹೊಸ ವರುಷದ ಹೊಸ್ತಿಲಲ್ಲಿ ನಿಂತಿದ್ದೇವೆ, ನವ ಕನಸುಗಳೊಂದಿಗೆ. ಒಳ್ಳೆಯ ಮನಸಿನಿಂದ, ಸುಂದರ ಕಲ್ಪನೆಗಳೊಂದಿಗೆ 2021ನೇಯ ವರ್ಷವನ್ನು ಸ್ವಾಗತಿಸೋಣ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.

ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

5 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

13 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

14 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

24 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago