Advertisement
MIRROR FOCUS

ಹೊಸವರ್ಷದ ನಿರೀಕ್ಷೆಗಳು ನಿಜವಾಗಲಿ

Share
ರಿಸ್ಥಿತಿ ಬದಲಾಗಿದೆ, ಎಂದಿನಂತಿಲ್ಲ. ಹೊಸವರ್ಷದ ಸ್ವಾಗತಕ್ಕೆ ವಿಶೇಷ ತಯಾರಿಯೊಂದಿಗೆ ಸಿದ್ಧವಾಗುತ್ತಿದ್ದ ಮನಸುಗಳು ಸುಮ್ಮನಾಗಿವೆ. ನಿನ್ನೆ ಮೊನ್ನೆಯವರೆಗೆ ತಣ್ಣಗಾಗಿದ್ದ ಕೊರೊನಾ ಮತ್ತೆ ಹೊಸ ರೂಪದಲ್ಲಿ ಪತ್ತೆಯಾಗುವುದರೊಂದಿಗೆ ಸ್ವಲ್ಪವೇ ಗರಿಕೆದರಿದ್ದ ಉತ್ಸಾಹ ಅಲ್ಲಿಗೆ ಕಮರಿದೆ.

2020 ರ ಆರಂಭದಲ್ಲೇ ಶುರುವಾದ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಯಿತು. ವುಹಾನ್ ನಲ್ಲಿ ಆರಂಭವಾದ ಕೋವಿಡ್ ಕೆಲವೇ ದಿನಗಳಲ್ಲಿ ಪ್ರಪಂಚದೆಲ್ಲೆಡೆ ವ್ಯಾಪಿಸಿತು. ಕಂಡು ಕೇಳರಿಯದ ಪರಿಣಾಮಗಳನ್ನು ಎದುರಿಸಬೇಕಾಯಿತು. ಅನಿರೀಕ್ಷಿತ ಪರಿಸ್ಥಿತಿ.

ಮನುಜನ ದುರಾಸೆ ಹೆಚ್ಚಾಯಿತೋ, ಪ್ರಕೃತಿ ಬದಲಾವಣೆ ಬಯಸಿತೋ ಅರಿಯದು.‌ ಬದುಕಿನ ಏಕತಾನತೆಯಿಂದ ಬೇಸತ್ತವರು ಒಂದು ಬದಲಾವಣೆ ಬಯಸಿದರು‌‌. ಕೊರೊನಾ ಬಂದು ಎಲ್ಲವನ್ನೂ ಬದಲಿಸಿ ಬಿಟ್ಟಿತು. 2020 ಯಾರು ಕೂಡ ಮರೆಯಲಾರದ ವರ್ಷವೆಂದೇ ದಾಖಲಾಯಿತು.

ಬದಲಾದ ಜೀವನ ಶೈಲಿಗೆ ಒಗ್ಗಿಕೊಂಡ ಜನತೆ 2021 ನ್ನು ಹೊಸ ನಿರೀಕ್ಷೆಯೊಂದಿಗೆ ಸ್ವಾಗತಿಸಲು ಸಜ್ಜಾಗಿಯಾಗಿದೆ. ಇಂದಿನ ಜನರ ಆಯ್ಕೆಗಳು, ಆದ್ಯತೆಗಳು ಬದಲಾಗಿವೆ. ದುಬಾರಿ ಜೀವನ ಶೈಲಿಗಿಂತ, ಸರಳ ಆರೋಗ್ಯಕರ ಪರಿಸರವೇ ಮುಖ್ಯ ಆಯ್ಕೆಗಳಾಗಿವೆ. ಆಹಾರದ ವಿಷಯದಲ್ಲೂ ಮನೆ ಆಹಾರದತ್ತಲೇ ಒಲವು ಮೂಡಿದೆ. ಕಹಿ , ಒಗರು ಆದರೂ ಅಮ್ಮ ಮಾಡಿ ಕೊಡುವ ಕಷಾಯವೇ ಅಮೃತವಾಗಿದೆ.

ಹೊಸ ವರುಷದ ಹೊಸ್ತಿಲಲ್ಲಿ ನಿಂತಿದ್ದೇವೆ, ನವ ಕನಸುಗಳೊಂದಿಗೆ. ಒಳ್ಳೆಯ ಮನಸಿನಿಂದ, ಸುಂದರ ಕಲ್ಪನೆಗಳೊಂದಿಗೆ 2021ನೇಯ ವರ್ಷವನ್ನು ಸ್ವಾಗತಿಸೋಣ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.

ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

5 minutes ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

6 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

7 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

17 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

18 hours ago