Advertisement
MIRROR FOCUS

ಹೊಸವರ್ಷದ ನಿರೀಕ್ಷೆಗಳು ನಿಜವಾಗಲಿ

Share
ರಿಸ್ಥಿತಿ ಬದಲಾಗಿದೆ, ಎಂದಿನಂತಿಲ್ಲ. ಹೊಸವರ್ಷದ ಸ್ವಾಗತಕ್ಕೆ ವಿಶೇಷ ತಯಾರಿಯೊಂದಿಗೆ ಸಿದ್ಧವಾಗುತ್ತಿದ್ದ ಮನಸುಗಳು ಸುಮ್ಮನಾಗಿವೆ. ನಿನ್ನೆ ಮೊನ್ನೆಯವರೆಗೆ ತಣ್ಣಗಾಗಿದ್ದ ಕೊರೊನಾ ಮತ್ತೆ ಹೊಸ ರೂಪದಲ್ಲಿ ಪತ್ತೆಯಾಗುವುದರೊಂದಿಗೆ ಸ್ವಲ್ಪವೇ ಗರಿಕೆದರಿದ್ದ ಉತ್ಸಾಹ ಅಲ್ಲಿಗೆ ಕಮರಿದೆ.

2020 ರ ಆರಂಭದಲ್ಲೇ ಶುರುವಾದ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಯಿತು. ವುಹಾನ್ ನಲ್ಲಿ ಆರಂಭವಾದ ಕೋವಿಡ್ ಕೆಲವೇ ದಿನಗಳಲ್ಲಿ ಪ್ರಪಂಚದೆಲ್ಲೆಡೆ ವ್ಯಾಪಿಸಿತು. ಕಂಡು ಕೇಳರಿಯದ ಪರಿಣಾಮಗಳನ್ನು ಎದುರಿಸಬೇಕಾಯಿತು. ಅನಿರೀಕ್ಷಿತ ಪರಿಸ್ಥಿತಿ.

ಮನುಜನ ದುರಾಸೆ ಹೆಚ್ಚಾಯಿತೋ, ಪ್ರಕೃತಿ ಬದಲಾವಣೆ ಬಯಸಿತೋ ಅರಿಯದು.‌ ಬದುಕಿನ ಏಕತಾನತೆಯಿಂದ ಬೇಸತ್ತವರು ಒಂದು ಬದಲಾವಣೆ ಬಯಸಿದರು‌‌. ಕೊರೊನಾ ಬಂದು ಎಲ್ಲವನ್ನೂ ಬದಲಿಸಿ ಬಿಟ್ಟಿತು. 2020 ಯಾರು ಕೂಡ ಮರೆಯಲಾರದ ವರ್ಷವೆಂದೇ ದಾಖಲಾಯಿತು.

ಬದಲಾದ ಜೀವನ ಶೈಲಿಗೆ ಒಗ್ಗಿಕೊಂಡ ಜನತೆ 2021 ನ್ನು ಹೊಸ ನಿರೀಕ್ಷೆಯೊಂದಿಗೆ ಸ್ವಾಗತಿಸಲು ಸಜ್ಜಾಗಿಯಾಗಿದೆ. ಇಂದಿನ ಜನರ ಆಯ್ಕೆಗಳು, ಆದ್ಯತೆಗಳು ಬದಲಾಗಿವೆ. ದುಬಾರಿ ಜೀವನ ಶೈಲಿಗಿಂತ, ಸರಳ ಆರೋಗ್ಯಕರ ಪರಿಸರವೇ ಮುಖ್ಯ ಆಯ್ಕೆಗಳಾಗಿವೆ. ಆಹಾರದ ವಿಷಯದಲ್ಲೂ ಮನೆ ಆಹಾರದತ್ತಲೇ ಒಲವು ಮೂಡಿದೆ. ಕಹಿ , ಒಗರು ಆದರೂ ಅಮ್ಮ ಮಾಡಿ ಕೊಡುವ ಕಷಾಯವೇ ಅಮೃತವಾಗಿದೆ.

ಹೊಸ ವರುಷದ ಹೊಸ್ತಿಲಲ್ಲಿ ನಿಂತಿದ್ದೇವೆ, ನವ ಕನಸುಗಳೊಂದಿಗೆ. ಒಳ್ಳೆಯ ಮನಸಿನಿಂದ, ಸುಂದರ ಕಲ್ಪನೆಗಳೊಂದಿಗೆ 2021ನೇಯ ವರ್ಷವನ್ನು ಸ್ವಾಗತಿಸೋಣ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.

ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago