2020 ರ ಆರಂಭದಲ್ಲೇ ಶುರುವಾದ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಯಿತು. ವುಹಾನ್ ನಲ್ಲಿ ಆರಂಭವಾದ ಕೋವಿಡ್ ಕೆಲವೇ ದಿನಗಳಲ್ಲಿ ಪ್ರಪಂಚದೆಲ್ಲೆಡೆ ವ್ಯಾಪಿಸಿತು. ಕಂಡು ಕೇಳರಿಯದ ಪರಿಣಾಮಗಳನ್ನು ಎದುರಿಸಬೇಕಾಯಿತು. ಅನಿರೀಕ್ಷಿತ ಪರಿಸ್ಥಿತಿ.
ಮನುಜನ ದುರಾಸೆ ಹೆಚ್ಚಾಯಿತೋ, ಪ್ರಕೃತಿ ಬದಲಾವಣೆ ಬಯಸಿತೋ ಅರಿಯದು. ಬದುಕಿನ ಏಕತಾನತೆಯಿಂದ ಬೇಸತ್ತವರು ಒಂದು ಬದಲಾವಣೆ ಬಯಸಿದರು. ಕೊರೊನಾ ಬಂದು ಎಲ್ಲವನ್ನೂ ಬದಲಿಸಿ ಬಿಟ್ಟಿತು. 2020 ಯಾರು ಕೂಡ ಮರೆಯಲಾರದ ವರ್ಷವೆಂದೇ ದಾಖಲಾಯಿತು.
ಬದಲಾದ ಜೀವನ ಶೈಲಿಗೆ ಒಗ್ಗಿಕೊಂಡ ಜನತೆ 2021 ನ್ನು ಹೊಸ ನಿರೀಕ್ಷೆಯೊಂದಿಗೆ ಸ್ವಾಗತಿಸಲು ಸಜ್ಜಾಗಿಯಾಗಿದೆ. ಇಂದಿನ ಜನರ ಆಯ್ಕೆಗಳು, ಆದ್ಯತೆಗಳು ಬದಲಾಗಿವೆ. ದುಬಾರಿ ಜೀವನ ಶೈಲಿಗಿಂತ, ಸರಳ ಆರೋಗ್ಯಕರ ಪರಿಸರವೇ ಮುಖ್ಯ ಆಯ್ಕೆಗಳಾಗಿವೆ. ಆಹಾರದ ವಿಷಯದಲ್ಲೂ ಮನೆ ಆಹಾರದತ್ತಲೇ ಒಲವು ಮೂಡಿದೆ. ಕಹಿ , ಒಗರು ಆದರೂ ಅಮ್ಮ ಮಾಡಿ ಕೊಡುವ ಕಷಾಯವೇ ಅಮೃತವಾಗಿದೆ.
ಹೊಸ ವರುಷದ ಹೊಸ್ತಿಲಲ್ಲಿ ನಿಂತಿದ್ದೇವೆ, ನವ ಕನಸುಗಳೊಂದಿಗೆ. ಒಳ್ಳೆಯ ಮನಸಿನಿಂದ, ಸುಂದರ ಕಲ್ಪನೆಗಳೊಂದಿಗೆ 2021ನೇಯ ವರ್ಷವನ್ನು ಸ್ವಾಗತಿಸೋಣ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.
ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…