ಉಜ್ಜಯಿನಿ | ಬಿರುಗಾಳಿಯಿಂದ ಕುಸಿದು ಬಿದ್ದ ಸಪ್ತಋಷಿಗಳ ವಿಗ್ರಹ…! |

May 29, 2023
8:20 PM

ಮಧ್ಯಪ್ರದೇಶದ ಉಜ್ಜಯಿನಿ ನಗರದ ಮಹಾಕಾಲೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾಕಾಲ್ ಲೋಕ ಕಾರಿಡಾರ್‌ನಲ್ಲಿ ಸ್ಥಾಪಿಸಲಾದ ‘ಸಪ್ತಋಷಿಗಳ’ ವಿಗ್ರಹಗಳ ಪೈಕಿ ಆರು ಬಿರುಗಾಳಿಯಿಂದ ಕುಸಿದು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾಕಾಲ್ ಲೋಕ ಯೋಜನೆಯ ಒಟ್ಟು ವೆಚ್ಚ 856 ಕೋಟಿ ರೂ.ಗಳಾಗಿದ್ದು, ಮೊದಲ ಹಂತದಲ್ಲಿ 351 ಕೋಟಿ ರೂ. ಆಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು.

ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಇದ್ದಾಗ ಬಿರುಗಾಳಿಗೆ ಕುಸಿತವಾಗಿದೆ. ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ. ಮಹಾಕಾಲ ಲೋಕ ಕಾರಿಡಾರ್‌ನಲ್ಲಿ ಒಟ್ಟು 160 ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಸುಮಾರು 10 ಅಡಿ ಎತ್ತರದ ಆರು ಸಪ್ತಋಷಿಗಳ ವಿಗ್ರಹಗಳು ಬಲವಾದ ಗಾಳಿಗೆ ಉರುಳಿಬಿದ್ದಿವೆ” ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ಕುಮಾ‌ ಪುರಷೋತ್ತಮ್ ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror