ಮಧ್ಯಪ್ರದೇಶದ ಉಜ್ಜಯಿನಿ ನಗರದ ಮಹಾಕಾಲೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾಕಾಲ್ ಲೋಕ ಕಾರಿಡಾರ್ನಲ್ಲಿ ಸ್ಥಾಪಿಸಲಾದ ‘ಸಪ್ತಋಷಿಗಳ’ ವಿಗ್ರಹಗಳ ಪೈಕಿ ಆರು ಬಿರುಗಾಳಿಯಿಂದ ಕುಸಿದು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾಕಾಲ್ ಲೋಕ ಯೋಜನೆಯ ಒಟ್ಟು ವೆಚ್ಚ 856 ಕೋಟಿ ರೂ.ಗಳಾಗಿದ್ದು, ಮೊದಲ ಹಂತದಲ್ಲಿ 351 ಕೋಟಿ ರೂ. ಆಗಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು.
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಇದ್ದಾಗ ಬಿರುಗಾಳಿಗೆ ಕುಸಿತವಾಗಿದೆ. ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ. ಮಹಾಕಾಲ ಲೋಕ ಕಾರಿಡಾರ್ನಲ್ಲಿ ಒಟ್ಟು 160 ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಸುಮಾರು 10 ಅಡಿ ಎತ್ತರದ ಆರು ಸಪ್ತಋಷಿಗಳ ವಿಗ್ರಹಗಳು ಬಲವಾದ ಗಾಳಿಗೆ ಉರುಳಿಬಿದ್ದಿವೆ” ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ಕುಮಾ ಪುರಷೋತ್ತಮ್ ಹೇಳಿದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…