ಮಧ್ಯಪ್ರದೇಶದ ಉಜ್ಜಯಿನಿ ನಗರದ ಮಹಾಕಾಲೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾಕಾಲ್ ಲೋಕ ಕಾರಿಡಾರ್ನಲ್ಲಿ ಸ್ಥಾಪಿಸಲಾದ ‘ಸಪ್ತಋಷಿಗಳ’ ವಿಗ್ರಹಗಳ ಪೈಕಿ ಆರು ಬಿರುಗಾಳಿಯಿಂದ ಕುಸಿದು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾಕಾಲ್ ಲೋಕ ಯೋಜನೆಯ ಒಟ್ಟು ವೆಚ್ಚ 856 ಕೋಟಿ ರೂ.ಗಳಾಗಿದ್ದು, ಮೊದಲ ಹಂತದಲ್ಲಿ 351 ಕೋಟಿ ರೂ. ಆಗಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು.
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಇದ್ದಾಗ ಬಿರುಗಾಳಿಗೆ ಕುಸಿತವಾಗಿದೆ. ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ. ಮಹಾಕಾಲ ಲೋಕ ಕಾರಿಡಾರ್ನಲ್ಲಿ ಒಟ್ಟು 160 ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಸುಮಾರು 10 ಅಡಿ ಎತ್ತರದ ಆರು ಸಪ್ತಋಷಿಗಳ ವಿಗ್ರಹಗಳು ಬಲವಾದ ಗಾಳಿಗೆ ಉರುಳಿಬಿದ್ದಿವೆ” ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ಕುಮಾ ಪುರಷೋತ್ತಮ್ ಹೇಳಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…