ಮಧ್ಯಪ್ರದೇಶದ ಉಜ್ಜಯಿನಿ ನಗರದ ಮಹಾಕಾಲೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾಕಾಲ್ ಲೋಕ ಕಾರಿಡಾರ್ನಲ್ಲಿ ಸ್ಥಾಪಿಸಲಾದ ‘ಸಪ್ತಋಷಿಗಳ’ ವಿಗ್ರಹಗಳ ಪೈಕಿ ಆರು ಬಿರುಗಾಳಿಯಿಂದ ಕುಸಿದು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾಕಾಲ್ ಲೋಕ ಯೋಜನೆಯ ಒಟ್ಟು ವೆಚ್ಚ 856 ಕೋಟಿ ರೂ.ಗಳಾಗಿದ್ದು, ಮೊದಲ ಹಂತದಲ್ಲಿ 351 ಕೋಟಿ ರೂ. ಆಗಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು.
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಇದ್ದಾಗ ಬಿರುಗಾಳಿಗೆ ಕುಸಿತವಾಗಿದೆ. ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ. ಮಹಾಕಾಲ ಲೋಕ ಕಾರಿಡಾರ್ನಲ್ಲಿ ಒಟ್ಟು 160 ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಸುಮಾರು 10 ಅಡಿ ಎತ್ತರದ ಆರು ಸಪ್ತಋಷಿಗಳ ವಿಗ್ರಹಗಳು ಬಲವಾದ ಗಾಳಿಗೆ ಉರುಳಿಬಿದ್ದಿವೆ” ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ಕುಮಾ ಪುರಷೋತ್ತಮ್ ಹೇಳಿದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…