ಇವರ ಪಾಠ ಇಂದಿನ ಸಮಾಜಕ್ಕೆ ಅಗತ್ಯ….! ಅದೇನು ಪಾಠ …?

November 17, 2021
9:09 PM

ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು  ಮಾನಸಿಕ ದುರ್ಬಲನೊಬ್ಬ.  ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.

ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ  ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.

ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror