ರಸ್ತೆ ಬದಿಯ ಸೂಚನಾ ಫಲಕವನ್ನು ಸ್ವಚ್ಛ ಮಾಡುವ ಕಾರ್ಯವೊಂದರ ಕತೆ ಇದು. ಅದರಲ್ಲೇನು ವಿಶೇಷ ..? . ಈ ಕಾರ್ಯ ಮಾಡಿರುವುದು ಮಾನಸಿಕ ದುರ್ಬಲನೊಬ್ಬ. ಈ ಮೂಲಕ ಸಾರ್ವಜನಿಕರಿಗೆ ಜವಾಬ್ದಾರಿಯ ಪಾಠ ಕಲಿಸಿದ್ದಾನೆ.
ಭಾನುವಾರ ಬೆಳಗ್ಗಿನ ಜಾವ ಶಿಶಿಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಾ. ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಕೆಲಸದ ನಿಮಿತ್ತ ಕೊಕ್ಕಡಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಧರ್ಮಸ್ಥಳ -ಶಿಶಿಲ ತಿರುವಿನಲ್ಲಿರುವ ಸೂಚನಾ ಫಲಕವನ್ನು ಓರ್ವ ವ್ಯಕ್ತಿ ಸ್ವಚ್ಚ ಮಾಡುತ್ತಿದ್ದ. ಇದನ್ನು ಕಂಡ ಅವರಿಗೆ ಧನ್ಯವಾದ ತಿಳಿಸಲು ಹತ್ತಿರ ತೆರಳಿದ್ದಾರೆ. ಆದರೆ ಆ ವ್ಯಕ್ತಿ ಮಾನಸಿಕವಾಗಿ ತುಂಬಾ ದುರ್ಬಲನಾಗಿದ್ದ ಮತ್ತು ತೀರಾ ಬಳಲಿದ್ದ. ವಿಚಾರಿಸಿದಾಗ ಆತ ತಾನು ಹಾಸನದ ರಮೆಶ, ” ಮಂಜಣ್ಣನ ಸೇವೆ ” ಮಾಡುತ್ತಿರುವುದಾಗಿ ಹೇಳಿದ.
ಬಳಿಕ ನೆರೆದ ಸ್ಥಳಿಯರು ಒಂದಷ್ಟು ಧನ ಸಹಾಯ ಮಾಡಿದಾಗ ಸಂತೊಷದಿಂದ ಸ್ವೀಕರಿಸಿದ. ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಈ ಸಮಾಜಕ್ಕೆ ನೀಡಿದ ಸಂದೇಶ ಗಮನಾರ್ಹವಾಗಿತ್ತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…