Advertisement
ಸುದ್ದಿಗಳು

ಜಗತ್ತಿನಲ್ಲಿ ಅಶಾಂತಿ ಹೆಚ್ಚಾಗಲಿದೆ | ಭೂಮಿ ನಡುಗುತ್ತದೆ… | ಕೋಡಿಮಠದ ಶ್ರೀ ಭವಿಷ್ಯ

Share

ಮುಂದಿನ ಮೂರು ತಿಂಗಳಲ್ಲಿ ಪ್ರಕೃತಿ ವಿಕೋಪ, ಮತಾಂಧತೆ, ಅಶಾಂತಿ, ಕಲಹ ಹೆಚ್ಚಾಗಲಿದೆ. ನಾಡಿನಲ್ಲಿ ಅಶಾಂತಿ ಹೆಚ್ಚಾಗಲಿದೆ.ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ.  ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳಾಗುತ್ತವೆ. ಗುಡ್ಡಗಳು ಕುಸಿತ. ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ… ಹೀಗೆಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ಹಿಂದೆ ನುಡಿದ ಮಾತಿನಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ . ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ ನಿಜವಾಗಿದೆ ಎಂದು ಸ್ವಾಮೀಜಿ ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಈ ಬಗ್ಗೆ ಹೇಳುತ್ತೇನೆ. ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ ಎಂದು ಕೋಡಿ ಶ್ರೀ ಹೇಳಿದರು. ರಾಜ್ಯ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅದಕ್ಕೇಕೆ ನಾನು ಅಪಶಕುನ ನುಡಿಯುವುದು ಬೇಡ. ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬಗ್ಗೆ ಹೇಳುತ್ತೇನೆ. ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ ಎಂದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

14 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

19 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

19 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

23 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago