ಮುಂದಿನ ಮೂರು ತಿಂಗಳಲ್ಲಿ ಪ್ರಕೃತಿ ವಿಕೋಪ, ಮತಾಂಧತೆ, ಅಶಾಂತಿ, ಕಲಹ ಹೆಚ್ಚಾಗಲಿದೆ. ನಾಡಿನಲ್ಲಿ ಅಶಾಂತಿ ಹೆಚ್ಚಾಗಲಿದೆ.ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳಾಗುತ್ತವೆ. ಗುಡ್ಡಗಳು ಕುಸಿತ. ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ… ಹೀಗೆಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ಹಿಂದೆ ನುಡಿದ ಮಾತಿನಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ . ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ ನಿಜವಾಗಿದೆ ಎಂದು ಸ್ವಾಮೀಜಿ ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಈ ಬಗ್ಗೆ ಹೇಳುತ್ತೇನೆ. ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ ಎಂದು ಕೋಡಿ ಶ್ರೀ ಹೇಳಿದರು. ರಾಜ್ಯ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅದಕ್ಕೇಕೆ ನಾನು ಅಪಶಕುನ ನುಡಿಯುವುದು ಬೇಡ. ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬಗ್ಗೆ ಹೇಳುತ್ತೇನೆ. ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ ಎಂದಿದ್ದಾರೆ.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490