Advertisement
ಸುದ್ದಿಗಳು

ಜಗತ್ತಿನಲ್ಲಿ ಅಶಾಂತಿ ಹೆಚ್ಚಾಗಲಿದೆ | ಭೂಮಿ ನಡುಗುತ್ತದೆ… | ಕೋಡಿಮಠದ ಶ್ರೀ ಭವಿಷ್ಯ

Share

ಮುಂದಿನ ಮೂರು ತಿಂಗಳಲ್ಲಿ ಪ್ರಕೃತಿ ವಿಕೋಪ, ಮತಾಂಧತೆ, ಅಶಾಂತಿ, ಕಲಹ ಹೆಚ್ಚಾಗಲಿದೆ. ನಾಡಿನಲ್ಲಿ ಅಶಾಂತಿ ಹೆಚ್ಚಾಗಲಿದೆ.ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ.  ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳಾಗುತ್ತವೆ. ಗುಡ್ಡಗಳು ಕುಸಿತ. ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ… ಹೀಗೆಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ಹಿಂದೆ ನುಡಿದ ಮಾತಿನಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ . ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ ನಿಜವಾಗಿದೆ ಎಂದು ಸ್ವಾಮೀಜಿ ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಈ ಬಗ್ಗೆ ಹೇಳುತ್ತೇನೆ. ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ ಎಂದು ಕೋಡಿ ಶ್ರೀ ಹೇಳಿದರು. ರಾಜ್ಯ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅದಕ್ಕೇಕೆ ನಾನು ಅಪಶಕುನ ನುಡಿಯುವುದು ಬೇಡ. ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬಗ್ಗೆ ಹೇಳುತ್ತೇನೆ. ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ ಎಂದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

6 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

23 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago