Advertisement
ಸುದ್ದಿಗಳು

ಜಗತ್ತಿನಲ್ಲಿ ಅಶಾಂತಿ ಹೆಚ್ಚಾಗಲಿದೆ | ಭೂಮಿ ನಡುಗುತ್ತದೆ… | ಕೋಡಿಮಠದ ಶ್ರೀ ಭವಿಷ್ಯ

Share

ಮುಂದಿನ ಮೂರು ತಿಂಗಳಲ್ಲಿ ಪ್ರಕೃತಿ ವಿಕೋಪ, ಮತಾಂಧತೆ, ಅಶಾಂತಿ, ಕಲಹ ಹೆಚ್ಚಾಗಲಿದೆ. ನಾಡಿನಲ್ಲಿ ಅಶಾಂತಿ ಹೆಚ್ಚಾಗಲಿದೆ.ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ.  ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳಾಗುತ್ತವೆ. ಗುಡ್ಡಗಳು ಕುಸಿತ. ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ… ಹೀಗೆಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ಹಿಂದೆ ನುಡಿದ ಮಾತಿನಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ . ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ ನಿಜವಾಗಿದೆ ಎಂದು ಸ್ವಾಮೀಜಿ ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಈ ಬಗ್ಗೆ ಹೇಳುತ್ತೇನೆ. ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ ಎಂದು ಕೋಡಿ ಶ್ರೀ ಹೇಳಿದರು. ರಾಜ್ಯ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅದಕ್ಕೇಕೆ ನಾನು ಅಪಶಕುನ ನುಡಿಯುವುದು ಬೇಡ. ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬಗ್ಗೆ ಹೇಳುತ್ತೇನೆ. ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ ಎಂದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

6 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

14 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago