ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

January 11, 2025
7:31 AM

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

Advertisement

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ
April 23, 2025
3:13 PM
by: ಸಾಯಿಶೇಖರ್ ಕರಿಕಳ
ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |
April 23, 2025
11:24 AM
by: ದ ರೂರಲ್ ಮಿರರ್.ಕಾಂ
ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!
April 23, 2025
8:13 AM
by: ದ ರೂರಲ್ ಮಿರರ್.ಕಾಂ
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group