ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.
ಅವರು ಇಂಡಿಯನ್ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.
ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…