Advertisement
ಸುದ್ದಿಗಳು

ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

Share

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

Advertisement
Advertisement
Advertisement
Advertisement

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

Advertisement

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದಲ್ಲಿ ಅನುಷ್ಠಾನ ಸಾಧ್ಯವಿಲ್ಲ : ಡಾ.ಪುರುಷೋತ್ತಮ ಬಿಳಿಮಲೆ

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು…

4 hours ago

ಸೀತೆ ಪುನೀತೆ | ಅಪೂರ್ಣ ರಾಮಾಯಣ

ರಾಮನು ಸೀತೆಯನ್ನು ಪರಿತ್ಯಜಿಸಿದ್ದು ಸರಿಯೆ? ಅರಣ್ಯದಲ್ಲಿ ಸೀತೆ ಏನಾದಳು? ಅವಳ ಮನಸ್ಸಿಗೆ ಎಂತಹ…

5 hours ago

ಮಾವಿನ ನಂತರ  ಬಾಳೆಯು ಪ್ರಮುಖ ಹಣ್ಣಿನ ಬೆಳೆ

ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…

2 days ago

ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ

ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ…

2 days ago

ಕೃಷಿ ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಶ್ರಮಿಸಬೇಕು

ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ…

2 days ago

ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |

ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…

3 days ago