ಸುದ್ದಿಗಳು

ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

Advertisement
Advertisement

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

3 hours ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

22 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

23 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

1 day ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

1 day ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago