ಸುದ್ದಿಗಳು

ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

Advertisement

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

4 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

4 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

5 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

5 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

13 hours ago