Advertisement
ಸುದ್ದಿಗಳು

ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

Share

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

Advertisement

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

2 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

3 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

3 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

3 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

3 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

3 hours ago