Advertisement
ಸುದ್ದಿಗಳು

ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

Share

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

7 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

8 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

18 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

18 hours ago