Advertisement
ಸುದ್ದಿಗಳು

ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

Share

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

13 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

13 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

13 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

23 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago