Advertisement
ಸುದ್ದಿಗಳು

ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

Share

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

2 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

7 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago