Advertisement
ಸುದ್ದಿಗಳು

ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |

Share

ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತಿ ವರ್ಷ ಜನರು ತಮ್ಮ ಸಂಪಾದನೆಯ ಶೇಕಡಾ 40ರಿಂದ 46ರಷ್ಟು ವೆಚ್ಚ ಮಾಡುತ್ತಾರೆ. ಆಹಾರ ಪದಾರ್ಥಗಳ ಹಣದುಬ್ಬರ ಅತಿಯಾಗಿದೆ. ಆದರೆ ಹಾಲು ಮತ್ತು ಹಾಲಿನ ಮೇಲಿನ ವೆಚ್ಚ ತುಂಬಾ ಕಡಿಮೆಯಾಗಿದೆ. ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ ಎಂದು ಭಾರತೀಯ ಡೈರಿ ಅಸೋಸಿಯೇಷನ್ ಅಧ್ಯಕ್ಷ ಡಾ.ಆರ್.ಎಸ್.ಸೋಧಿ ಹೇಳಿದರು.

ಅವರು ಇಂಡಿಯನ್ ಡೈರಿ ಅಸೋಸಿಯೇಷನ್  ದಕ್ಷಿಣ ವಲಯದ ವತಿಯಿಂದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಡೈರಿಗಳು ಸಾಧಿಸಿರುವ ಸದೃಢ ಬೆಳವಣಿಗೆಯಿಂದ ಹಣದುಬ್ಬರ ಕಡಿಮೆಯಾಗಲು ಸಾಧ್ಯವಾಗಿದೆ. ಡೈರಿ ಕ್ಷೇತ್ರಕ್ಕೆ ಆಧುನೀಕರಣ ಮತ್ತು ತಾಂತ್ರಿಕ ಪ್ರವೇಶ ಹಾಲಿನ ಗುಣಮಟ್ಟ, ಬೆಲೆ , ಉತ್ಪಾದನೆ ಹೆಚ್ಚಳಕ್ಕೆ ಶಕ್ತಿ ನೀಡಿತು ಎಂದು ಅಭಿಪ್ರಾಯಪಟ್ಟರು.

ಭಾರತೀಯ ಡೈರಿ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಡಾ.ರಾಮ್ ಪಿ. ಅನೇಜಾ, ಹಿಂದೆ ಪೂರ್ವ ದೇಶಗಳಲ್ಲಿ ಹಾಲಿನ ಸೇವನೆ ಜನಪ್ರಿಯವಾಗಿರಲಿಲ್ಲ . ಹಾಲು ಸೇವನೆ ಮಾಡುವವರು ದೈಹಿಕವಾಗಿ ಎತ್ತರವಾಗಿರುತ್ತಾರೆ. ಈ ಕಾರಣದಿಂದಲೇ ಹಾಲು ಸೇವಿಸುತ್ತಿದ್ದ ಅಮೆರಿಕದವರು ಜಪಾನಿಯರ ವಿರುದ್ಧ ಎರಡನೇ ಎರಡನೇ ಮಹಾಯುದ್ಧದಲ್ಲಿ ಗೆದ್ದರು ಎಂಬ ತಮಾಶೆಯ ಮಾತು ದಶಕಗಳ ಹಿಂದೆ ಜನಪ್ರಿಯವಾಗಿತ್ತು. ಹಾಲಿನ ಉತ್ಪಾದನೆಯನ್ನು ದಶಕಗಳಿಂದ ನಿರ್ಲಕ್ಷಿಸಿದ್ದ  ಚೀನಿಯರೂ ಬಳಿಕ ಹಾಲು ಸೇವಿಸುವುದನ್ನು ಕಲಿತರು. ಇಂದು ಚೀನಾ ಜಗತ್ತಿನಲ್ಲೇ ಅತಿ ಹೆಚ್ಚು 60 ಮಿಲಿಯನ್ ಟನ್ ಹಾಲು ಉತ್ಪಾದಿಸುತ್ತಿದೆ. ಡೈರಿ ಇಂದು ಹೈನುಗಾರಿಕೆಯಿಂದ ಉದ್ಯಮದ ವರೆಗೆ ಬೆಳೆದು ನಿಂತಿದ್ದು, ಈ ಕ್ಷೇತ್ರ ಉಜ್ವಲ ಭವಿಷ್ಯ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಎಬಿಎಲ್ಇ ಅಧ್ಯಕ್ಷ ಜಿ.ಎಸ್.ಕೃಷ್ಣನ್, ದೊಡ್ಲಾ ಸಂಸ್ಥೆಯ ಬಿ.ವಿ.ಕೆ.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

20 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago