ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ ಸ್ನೇಹಿಯನ್ನಾಗಿ ಮಾಡಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ದೇಶಾದ್ಯಂತ ಇಲ್ಲಿಯವರೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ 4.78 ಕೋಟಿಗೂ ಹೆಚ್ಚು ಮರಗಳನ್ನು ನೆಡಲಾಗಿದೆ ಮತ್ತು 70 ಸಾವಿರ ಮರಗಳನ್ನು ನೆಡಲಾಗಿದೆ.
ಪರಿಸರ ಸುಸ್ಥಿರತೆಯನ್ನು ಉತ್ತೇಜಿಸಲು ಮತ್ತು ‘ಏಕ್ ಪೆಡ್ ಮಾ ಕೆ ನಾಮ್ 2.0’ ಅಭಿಯಾನದ ಅಂಗವಾಗಿ ಫರಿದಾಬಾದ್-ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರಿಡಾರ್ ಉದ್ದಕ್ಕೂ ಸುಮಾರು 17,000 ಗಿಡಗಳನ್ನು ನೆಡುವ ಅಭಿಯಾನವನ್ನು ಆಯೋಜಿಸಿತ್ತು. ಬಿದಿರು ನೆಡುವಿಕೆ, ದಟ್ಟವಾದ ನೆಡುತೋಪು ಮತ್ತು ಗಿಡಗಳ ನೆಡುವ ಮೂಲಕ ಹಸಿರು ಕಾರಿಡಾರ್ಗಳನ್ನು ರಚಿಸುವತ್ತ ಗಮನಹರಿಸಿದೆ. 2024-25ರ ಅವಧಿಯಲ್ಲಿ 60 ಲಕ್ಷ ನೆಡುತೋಪುಗಳನ್ನು ಉದ್ದೇಶಿಸಲಾಗಿತ್ತು, ಆದರೆ ಸುಮಾರು 67 ಲಕ್ಷ ಗಿಡಗಳನ್ನು ನೆಟ್ಟಿದೆ. ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಪ್ರಸಕ್ತ ವರ್ಷದಲ್ಲಿ 12 ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿದೆ. ಹಸಿರು ಹೆದ್ದಾರಿ ಅನುಷ್ಠಾನಗೊಳಿಸಿದಾಗಿನಿಂದ ಸುಮಾರು 4.78 ಕೋಟಿ ಗಿಡ ನೆಡಲಾಗಿದೆ.
ದೇಶದಲ್ಲಿನ ಮಾಲಿನ್ಯದ ಶೇಕಡಾ 40 ರಷ್ಟು ಸಾರಿಗೆ ವಲಯದಿಂದ ಕಾರಣವಾಗುವುದರಿಂದ, ಪರಿಸರ ಮತ್ತು ಪರಿಸರದ ಬಗ್ಗೆ ಸಾರಿಗೆ ಇಲಾಖೆಯು ಹೆಚ್ಚಿನ ಜವಾಬ್ದಾರಿಯನ್ನು ಹೊಂದಿದೆ ಎಂದು ಸಚಿವ ನಿತಿನ್ ಗಡ್ಗರಿ ಹೇಳುತ್ತಾರೆ.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…