ಕಳೆದ ವರ್ಷ ಭಾರಿ ಸದ್ದು ಮಾಡಿತ್ತು, ಮಂಗಳೂರಿನಲ್ಲಿ ಆಟೋದಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ. ಕಳೆದ ಒಂದು ವರ್ಷದಿಂದ ರಾಷ್ಟ್ರೀಯ ತನಿಖಾದ ಸಂಸ್ಥೆ ಆರೋಪಿಗಾಗಿ ಶೋಧ ನಡೆಸುತ್ತಿತ್ತು. ಇದೀಗ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾದ ಸಂಸ್ಥೆ ಬಂಧಿಸಿದೆ.
ಕೀನ್ಯಾ ರಾಜಧಾನಿ ನೈರೋಬಿಯಿಂದ ಆತ ದೆಹಲಿಗೆ ಬಂದಿಳಿಯುತ್ತಿದ್ದಂತೆ ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ಅಲಿ 2020 ರಿಂದ ಐಸಿಸ್ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ. ಭಾರತದಲ್ಲಿ ನೆಲೆಸದೇ ಇದ್ದರೂ ಐಎಸ್ನ ಭಾರತ ವಿರೋಧಿ ಭಯೋತ್ಪಾದಕ ಅಜೆಂಡಾವನ್ನು ಉತ್ತೇಜಿಸಲು ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿದ್ದ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…