ದೇಶಾದ್ಯಂತ ಪಿಎಫ್‌ಐ ಮೇಲೆ 2 ನೇ ಬಾರಿ ದಾಳಿ | ಅಖಿಲ ಭಾರತ ಇಮಾಮ್ ಕೌನ್ಸಿಲ್‌ ಮಹಾರಾಷ್ಟ್ರ ಮುಖ್ಯಸ್ಥ ಸೇರಿ ಹಲವರು ವಶಕ್ಕೆ |

September 27, 2022
2:19 PM

ದೇಶದ ವಿವಿದೆಡೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಎರಡನೇ ಬಾರಿಗೆ ದಾಳಿ ನಡೆದಿದೆ. ಕ್ರೈ ಬ್ರಾಂಚ್‌ ಪೊಲೀಸರು ಹಾಗೂ ಎನ್‌ ಐ ಎ ತಂಡ ದಾಳಿ ಹಲವು ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಮಂಗಳೂರು, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಕಡೆ ದಾಳಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಾಸಿಕ್ ಪೊಲೀಸ್ ಕ್ರೈಂ ಬ್ರಾಂಚ್  ವಿಭಾಗವು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್‌ನ ರಾಜ್ಯ ಮುಖ್ಯಸ್ಥರನ್ನು ಬಂಧಿಸಿದೆ. ಥಾಣೆ, ನಾಸಿಕ್ ಮತ್ತು ಮಾಲೆಗಾಂವ್ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ದಳದಿಂದ ದಾಳಿ ನಡೆಯುತ್ತಿದೆ.ಸುಮಾರು 40 ಜನರನ್ನು ಬಂಧಿಸಲಾಗಿದೆ. ಪಿಎಫ್‌ ಐ ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ. ಅರಬ್‌ ದೇಶದಿಂದ ಅಕ್ರಮವಾಗಿ ಹಣ ಪಡೆಯುತ್ತಿದೆ ಎಂಬುದು ಸೇರಿದಂತೆ ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಎನ್‌ ಐಎ ದಾಳಿ ನಡೆಸಿದೆ. ಅಸ್ಸಾಂ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಇತರ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ದಾಳಿ ನಡೆಸಲಾಗುತ್ತಿದೆ.

ಕರ್ನಾಟಕದಲ್ಲಿ ಎಸ್‌ಡಿಪಿಐ ಪ್ರಮುಖರನ್ನು ಸೇರಿದಂತೆ ಸುಮಾರು 80 ರಿಂದ 90 ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮತ್ತು ಮುಖಂಡರನ್ನು ಮುನ್ನೆಚ್ಚರಿಕೆಯಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಪೊಲೀಸ್ ದಾಳಿ ನಡೆಯುತ್ತಿದೆ. ಸೆಕ್ಷನ್ 108, 151 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror