ದೇಶಾದ್ಯಂತ ಪಿಎಫ್‌ಐ ಮೇಲೆ 2 ನೇ ಬಾರಿ ದಾಳಿ | ಅಖಿಲ ಭಾರತ ಇಮಾಮ್ ಕೌನ್ಸಿಲ್‌ ಮಹಾರಾಷ್ಟ್ರ ಮುಖ್ಯಸ್ಥ ಸೇರಿ ಹಲವರು ವಶಕ್ಕೆ |

September 27, 2022
2:19 PM

ದೇಶದ ವಿವಿದೆಡೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಎರಡನೇ ಬಾರಿಗೆ ದಾಳಿ ನಡೆದಿದೆ. ಕ್ರೈ ಬ್ರಾಂಚ್‌ ಪೊಲೀಸರು ಹಾಗೂ ಎನ್‌ ಐ ಎ ತಂಡ ದಾಳಿ ಹಲವು ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

Advertisement
Advertisement

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಮಂಗಳೂರು, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಕಡೆ ದಾಳಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಾಸಿಕ್ ಪೊಲೀಸ್ ಕ್ರೈಂ ಬ್ರಾಂಚ್  ವಿಭಾಗವು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್‌ನ ರಾಜ್ಯ ಮುಖ್ಯಸ್ಥರನ್ನು ಬಂಧಿಸಿದೆ. ಥಾಣೆ, ನಾಸಿಕ್ ಮತ್ತು ಮಾಲೆಗಾಂವ್ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ದಳದಿಂದ ದಾಳಿ ನಡೆಯುತ್ತಿದೆ.ಸುಮಾರು 40 ಜನರನ್ನು ಬಂಧಿಸಲಾಗಿದೆ. ಪಿಎಫ್‌ ಐ ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ. ಅರಬ್‌ ದೇಶದಿಂದ ಅಕ್ರಮವಾಗಿ ಹಣ ಪಡೆಯುತ್ತಿದೆ ಎಂಬುದು ಸೇರಿದಂತೆ ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಎನ್‌ ಐಎ ದಾಳಿ ನಡೆಸಿದೆ. ಅಸ್ಸಾಂ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಇತರ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ದಾಳಿ ನಡೆಸಲಾಗುತ್ತಿದೆ.

ಕರ್ನಾಟಕದಲ್ಲಿ ಎಸ್‌ಡಿಪಿಐ ಪ್ರಮುಖರನ್ನು ಸೇರಿದಂತೆ ಸುಮಾರು 80 ರಿಂದ 90 ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮತ್ತು ಮುಖಂಡರನ್ನು ಮುನ್ನೆಚ್ಚರಿಕೆಯಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಪೊಲೀಸ್ ದಾಳಿ ನಡೆಯುತ್ತಿದೆ. ಸೆಕ್ಷನ್ 108, 151 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?
May 24, 2025
9:13 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ
May 24, 2025
5:42 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group