ರಾಷ್ಟ್ರೀಯ

ದೇಶಾದ್ಯಂತ ಪಿಎಫ್‌ಐ ಮೇಲೆ 2 ನೇ ಬಾರಿ ದಾಳಿ | ಅಖಿಲ ಭಾರತ ಇಮಾಮ್ ಕೌನ್ಸಿಲ್‌ ಮಹಾರಾಷ್ಟ್ರ ಮುಖ್ಯಸ್ಥ ಸೇರಿ ಹಲವರು ವಶಕ್ಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದ ವಿವಿದೆಡೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಎರಡನೇ ಬಾರಿಗೆ ದಾಳಿ ನಡೆದಿದೆ. ಕ್ರೈ ಬ್ರಾಂಚ್‌ ಪೊಲೀಸರು ಹಾಗೂ ಎನ್‌ ಐ ಎ ತಂಡ ದಾಳಿ ಹಲವು ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

Advertisement
Advertisement

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಮಂಗಳೂರು, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಕಡೆ ದಾಳಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಾಸಿಕ್ ಪೊಲೀಸ್ ಕ್ರೈಂ ಬ್ರಾಂಚ್  ವಿಭಾಗವು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್‌ನ ರಾಜ್ಯ ಮುಖ್ಯಸ್ಥರನ್ನು ಬಂಧಿಸಿದೆ. ಥಾಣೆ, ನಾಸಿಕ್ ಮತ್ತು ಮಾಲೆಗಾಂವ್ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ದಳದಿಂದ ದಾಳಿ ನಡೆಯುತ್ತಿದೆ.ಸುಮಾರು 40 ಜನರನ್ನು ಬಂಧಿಸಲಾಗಿದೆ. ಪಿಎಫ್‌ ಐ ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ. ಅರಬ್‌ ದೇಶದಿಂದ ಅಕ್ರಮವಾಗಿ ಹಣ ಪಡೆಯುತ್ತಿದೆ ಎಂಬುದು ಸೇರಿದಂತೆ ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಎನ್‌ ಐಎ ದಾಳಿ ನಡೆಸಿದೆ. ಅಸ್ಸಾಂ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಇತರ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ದಾಳಿ ನಡೆಸಲಾಗುತ್ತಿದೆ.

ಕರ್ನಾಟಕದಲ್ಲಿ ಎಸ್‌ಡಿಪಿಐ ಪ್ರಮುಖರನ್ನು ಸೇರಿದಂತೆ ಸುಮಾರು 80 ರಿಂದ 90 ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮತ್ತು ಮುಖಂಡರನ್ನು ಮುನ್ನೆಚ್ಚರಿಕೆಯಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಪೊಲೀಸ್ ದಾಳಿ ನಡೆಯುತ್ತಿದೆ. ಸೆಕ್ಷನ್ 108, 151 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

2 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

3 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

10 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

19 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

20 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

20 hours ago