Advertisement
ರಾಷ್ಟ್ರೀಯ

ದೇಶಾದ್ಯಂತ ಪಿಎಫ್‌ಐ ಮೇಲೆ 2 ನೇ ಬಾರಿ ದಾಳಿ | ಅಖಿಲ ಭಾರತ ಇಮಾಮ್ ಕೌನ್ಸಿಲ್‌ ಮಹಾರಾಷ್ಟ್ರ ಮುಖ್ಯಸ್ಥ ಸೇರಿ ಹಲವರು ವಶಕ್ಕೆ |

Share

ದೇಶದ ವಿವಿದೆಡೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಎರಡನೇ ಬಾರಿಗೆ ದಾಳಿ ನಡೆದಿದೆ. ಕ್ರೈ ಬ್ರಾಂಚ್‌ ಪೊಲೀಸರು ಹಾಗೂ ಎನ್‌ ಐ ಎ ತಂಡ ದಾಳಿ ಹಲವು ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಮಂಗಳೂರು, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಕಡೆ ದಾಳಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಾಸಿಕ್ ಪೊಲೀಸ್ ಕ್ರೈಂ ಬ್ರಾಂಚ್  ವಿಭಾಗವು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್‌ನ ರಾಜ್ಯ ಮುಖ್ಯಸ್ಥರನ್ನು ಬಂಧಿಸಿದೆ. ಥಾಣೆ, ನಾಸಿಕ್ ಮತ್ತು ಮಾಲೆಗಾಂವ್ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ದಳದಿಂದ ದಾಳಿ ನಡೆಯುತ್ತಿದೆ.ಸುಮಾರು 40 ಜನರನ್ನು ಬಂಧಿಸಲಾಗಿದೆ. ಪಿಎಫ್‌ ಐ ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ. ಅರಬ್‌ ದೇಶದಿಂದ ಅಕ್ರಮವಾಗಿ ಹಣ ಪಡೆಯುತ್ತಿದೆ ಎಂಬುದು ಸೇರಿದಂತೆ ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಎನ್‌ ಐಎ ದಾಳಿ ನಡೆಸಿದೆ. ಅಸ್ಸಾಂ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಇತರ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ದಾಳಿ ನಡೆಸಲಾಗುತ್ತಿದೆ.

ಕರ್ನಾಟಕದಲ್ಲಿ ಎಸ್‌ಡಿಪಿಐ ಪ್ರಮುಖರನ್ನು ಸೇರಿದಂತೆ ಸುಮಾರು 80 ರಿಂದ 90 ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮತ್ತು ಮುಖಂಡರನ್ನು ಮುನ್ನೆಚ್ಚರಿಕೆಯಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಪೊಲೀಸ್ ದಾಳಿ ನಡೆಯುತ್ತಿದೆ. ಸೆಕ್ಷನ್ 108, 151 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

45 minutes ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

1 hour ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

2 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

3 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

16 hours ago