ದೇಶದ ವಿವಿದೆಡೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಎರಡನೇ ಬಾರಿಗೆ ದಾಳಿ ನಡೆದಿದೆ. ಕ್ರೈ ಬ್ರಾಂಚ್ ಪೊಲೀಸರು ಹಾಗೂ ಎನ್ ಐ ಎ ತಂಡ ದಾಳಿ ಹಲವು ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಮಂಗಳೂರು, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಕಡೆ ದಾಳಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಾಸಿಕ್ ಪೊಲೀಸ್ ಕ್ರೈಂ ಬ್ರಾಂಚ್ ವಿಭಾಗವು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ನ ರಾಜ್ಯ ಮುಖ್ಯಸ್ಥರನ್ನು ಬಂಧಿಸಿದೆ. ಥಾಣೆ, ನಾಸಿಕ್ ಮತ್ತು ಮಾಲೆಗಾಂವ್ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ದಳದಿಂದ ದಾಳಿ ನಡೆಯುತ್ತಿದೆ.ಸುಮಾರು 40 ಜನರನ್ನು ಬಂಧಿಸಲಾಗಿದೆ. ಪಿಎಫ್ ಐ ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ. ಅರಬ್ ದೇಶದಿಂದ ಅಕ್ರಮವಾಗಿ ಹಣ ಪಡೆಯುತ್ತಿದೆ ಎಂಬುದು ಸೇರಿದಂತೆ ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಎನ್ ಐಎ ದಾಳಿ ನಡೆಸಿದೆ. ಅಸ್ಸಾಂ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಇತರ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ದಾಳಿ ನಡೆಸಲಾಗುತ್ತಿದೆ.
ಕರ್ನಾಟಕದಲ್ಲಿ ಎಸ್ಡಿಪಿಐ ಪ್ರಮುಖರನ್ನು ಸೇರಿದಂತೆ ಸುಮಾರು 80 ರಿಂದ 90 ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯಕರ್ತರು ಮತ್ತು ಮುಖಂಡರನ್ನು ಮುನ್ನೆಚ್ಚರಿಕೆಯಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಪೊಲೀಸ್ ದಾಳಿ ನಡೆಯುತ್ತಿದೆ. ಸೆಕ್ಷನ್ 108, 151 ಸಿಆರ್ಪಿಸಿ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…