ದೇಶದ ವಿವಿದೆಡೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಎರಡನೇ ಬಾರಿಗೆ ದಾಳಿ ನಡೆದಿದೆ. ಕ್ರೈ ಬ್ರಾಂಚ್ ಪೊಲೀಸರು ಹಾಗೂ ಎನ್ ಐ ಎ ತಂಡ ದಾಳಿ ಹಲವು ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಹಾಗೂ ಮುಖಂಡರ ನಿವಾಸಿಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಮಂಗಳೂರು, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಕಡೆ ದಾಳಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಾಸಿಕ್ ಪೊಲೀಸ್ ಕ್ರೈಂ ಬ್ರಾಂಚ್ ವಿಭಾಗವು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ನ ರಾಜ್ಯ ಮುಖ್ಯಸ್ಥರನ್ನು ಬಂಧಿಸಿದೆ. ಥಾಣೆ, ನಾಸಿಕ್ ಮತ್ತು ಮಾಲೆಗಾಂವ್ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ದಳದಿಂದ ದಾಳಿ ನಡೆಯುತ್ತಿದೆ.ಸುಮಾರು 40 ಜನರನ್ನು ಬಂಧಿಸಲಾಗಿದೆ. ಪಿಎಫ್ ಐ ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ. ಅರಬ್ ದೇಶದಿಂದ ಅಕ್ರಮವಾಗಿ ಹಣ ಪಡೆಯುತ್ತಿದೆ ಎಂಬುದು ಸೇರಿದಂತೆ ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಎನ್ ಐಎ ದಾಳಿ ನಡೆಸಿದೆ. ಅಸ್ಸಾಂ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಇತರ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ದಾಳಿ ನಡೆಸಲಾಗುತ್ತಿದೆ.
ಕರ್ನಾಟಕದಲ್ಲಿ ಎಸ್ಡಿಪಿಐ ಪ್ರಮುಖರನ್ನು ಸೇರಿದಂತೆ ಸುಮಾರು 80 ರಿಂದ 90 ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯಕರ್ತರು ಮತ್ತು ಮುಖಂಡರನ್ನು ಮುನ್ನೆಚ್ಚರಿಕೆಯಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಪೊಲೀಸ್ ದಾಳಿ ನಡೆಯುತ್ತಿದೆ. ಸೆಕ್ಷನ್ 108, 151 ಸಿಆರ್ಪಿಸಿ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…