Advertisement
ಸುದ್ದಿಗಳು

ದೇಶದಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಹಾಗೂ ಇಡಿ ದಾಳಿ | 100 ಕ್ಕೂ ಹೆಚ್ಚು ಪಿಎಫ್‌ಐ ಸದಸ್ಯರು ವಶಕ್ಕೆ | ಮಂಗಳೂರಿನಲ್ಲಿಯೂ ದಾಳಿ |

Share

ವಿವಿಧ ಪ್ರಕರಣಗಳಿಗೆ ಸಂಬಂಧಿಸಿ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಚೇರಿಗಳ ಮೇಲೆ ಹಾಗೂ ಪ್ರಮುಖ ನಾಯಕರ ಮನೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ದೇಶದಾದ್ಯಂತ ಸುಮಾರು 100 ಮಂದಿ ಪಿಎಫ್‌ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.  ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಂತರ ವಿವಿಧ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತನಿಖೆ ನಡೆಯುತ್ತಿತ್ತು. ಇದೀಗ ಮಂಗಳೂರು ಸೇರಿದಂತೆ ದೇಶದ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಬೆಳಗ್ಗೆ 3.30 ಕ್ಕೆ ಕೆಲವು ಕಡೆ ದಾಳಿ ಆರಂಭವಾಗಿದೆ. ಮಂಗಳೂರಿನಲ್ಲಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಜಿಲ್ಲಾ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಈಗಾಗಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.  ಕೇಂದ್ರ ಗೃಹ ಸಚಿವಾಲಯ ಕೂಡ ಈ ಕಾರ್ಯಾಚರಣೆಯ ಮೇಲೆ ನಿಗಾ ಇರಿಸಿದೆ. ಇಬ್ಬರು ಪಿಎಫ್‌ಐ ಸದಸ್ಯರನ್ನು ಲಕ್ನೋದಿಂದ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ  ಸಲಾಂ ಅವರ ಮನೆ ಸೇರಿದಂತೆ ಪಿಎಫ್‌ಐ ಮುಖಂಡರ ಮನೆ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಮಧ್ಯರಾತ್ರಿಯಿಂದ ಎನ್‌ಐಎ ಮತ್ತು ಇಡಿ ದಾಳಿ ನಡೆಸುತ್ತಿದೆ, 9 ಜನರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ದಾಳಿ ನಡೆಯುತ್ತಿದ್ದಂತೆಯೇ ಎಲ್ಲೆಡೆಯೂ  ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

12 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago