Advertisement
ಸುದ್ದಿಗಳು

ದೇಶದಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಹಾಗೂ ಇಡಿ ದಾಳಿ | 100 ಕ್ಕೂ ಹೆಚ್ಚು ಪಿಎಫ್‌ಐ ಸದಸ್ಯರು ವಶಕ್ಕೆ | ಮಂಗಳೂರಿನಲ್ಲಿಯೂ ದಾಳಿ |

Share

ವಿವಿಧ ಪ್ರಕರಣಗಳಿಗೆ ಸಂಬಂಧಿಸಿ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಚೇರಿಗಳ ಮೇಲೆ ಹಾಗೂ ಪ್ರಮುಖ ನಾಯಕರ ಮನೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ದೇಶದಾದ್ಯಂತ ಸುಮಾರು 100 ಮಂದಿ ಪಿಎಫ್‌ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.  ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಂತರ ವಿವಿಧ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತನಿಖೆ ನಡೆಯುತ್ತಿತ್ತು. ಇದೀಗ ಮಂಗಳೂರು ಸೇರಿದಂತೆ ದೇಶದ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಬೆಳಗ್ಗೆ 3.30 ಕ್ಕೆ ಕೆಲವು ಕಡೆ ದಾಳಿ ಆರಂಭವಾಗಿದೆ. ಮಂಗಳೂರಿನಲ್ಲಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಜಿಲ್ಲಾ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಈಗಾಗಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.  ಕೇಂದ್ರ ಗೃಹ ಸಚಿವಾಲಯ ಕೂಡ ಈ ಕಾರ್ಯಾಚರಣೆಯ ಮೇಲೆ ನಿಗಾ ಇರಿಸಿದೆ. ಇಬ್ಬರು ಪಿಎಫ್‌ಐ ಸದಸ್ಯರನ್ನು ಲಕ್ನೋದಿಂದ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ  ಸಲಾಂ ಅವರ ಮನೆ ಸೇರಿದಂತೆ ಪಿಎಫ್‌ಐ ಮುಖಂಡರ ಮನೆ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಮಧ್ಯರಾತ್ರಿಯಿಂದ ಎನ್‌ಐಎ ಮತ್ತು ಇಡಿ ದಾಳಿ ನಡೆಸುತ್ತಿದೆ, 9 ಜನರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ದಾಳಿ ನಡೆಯುತ್ತಿದ್ದಂತೆಯೇ ಎಲ್ಲೆಡೆಯೂ  ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

4 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago