MIRROR FOCUS

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ಗೆ ಓರ್ವ ಬಲಿ | ಕರ್ನಾಟಕದಲ್ಲಿ ಎಚ್ಚರ | ಗಡಿ ಭಾಗದಲ್ಲಿ ಪ್ರಯಾಣಿಕರ ಮೇಲೆ ನಿಗಾ | ನಿಫಾ ಲಕ್ಷಣ ಏನು..? ಮುಂಜಾಗ್ರತೆ ಏನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕದಲ್ಲಿ ಡೆಂಗ್ಯು ಭೀತಿಯ ನಡುವೆ ಕೇರಳದಲ್ಲಿ ನಿಫಾ ವೈರಸ್‌ ಆತಂಕ ಎದುರಾಗಿದೆ.  ಕೇರಳದ ಮಲಪ್ಪುರಂನಲ್ಲಿ ನಿಫಾ ವೈರಸ್  ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.  ಈ ಬೆನ್ನಲ್ಲೇ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ (ಐಸಿಎಂಆರ್​) ತಂಡ ಕೋಯಿಕ್ಕೋಡ್​​ಗೆ ಆಗಮಿಸಿದೆ. ಬಾಲಕನ ಸಂಪರ್ಕದಲ್ಲಿದ್ದ 13 ಜನರ ಸೀರಮ್ ಪರೀಕ್ಷೆಯ ಫಲಿತಾಂಶಗಳಿಗಾಗಿ  ಕಾಯಲಾಗುತ್ತಿದೆ. 

Advertisement

ಭಾರತೀಯ ವೈದ್ಯಕೀಯ ಸಂಶೋಧನಾ (ಐಸಿಎಂಆರ್​) ತಂಡದಲ್ಲಿ ನಾಲ್ವರು ವೈದ್ಯರು ಮತ್ತು ಇಬ್ಬರು ತಂತ್ರಜ್ಞರು ಇದ್ದು, ಇವರು ಸೋಂಕಿತ ತಡೆ ವಿಧಾನ, ಪರೀಕ್ಷೆ ಸೌಲಭ್ಯ ಮತ್ತು ಚಿಕಿತ್ಸೆ ಪ್ರಕ್ರಿಯೆ ಕುರಿತು ರಾಜ್ಯ ಆರೋಗ್ಯ ಇಲಾಖೆ ಜೊತೆಗೆ ಕಾರ್ಯ ನಿರ್ವಹಿಸಲಿದ್ದಾರೆ. ಪ್ರಸ್ತತ, ಕೋಯಿಕ್ಕೋಡ್​ನ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿರುವ 68 ವರ್ಷದ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಸಂಶಯ ಎದುರಾಗಿದೆ. ಅವರ ಪ್ರಾಥಮಿಕ ಪರೀಕ್ಷೆಗಳಲ್ಲಿ ನೆಗೆಟಿವ್​ ಬಂದಿದ್ದು, ಐಸಿಯುನಲ್ಲಿರುವ ಅವರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. 350 ಜನರ ಸ್ಯಾಂಪಲ್‌ ತೆಗೆಯಲಾಗಿದೆ. ಈ  ಪೈಕಿ ನಾಲ್ವರು ತಿರುವನಂತಪುರಂ ಹಾಗೂ ಇಬ್ಬರು ಪಾಲಕ್ಕಾಡ್‌ನವರು.

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಹೆಚ್ಚಾಗಿದೆ. ಈಗಾಗಲೇ ರಾಜ್ಯದಲ್ಲಿ ಹೈ ಅಲರ್ಟ್​​ ಘೋಷಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್​ ಹೆಚ್ಚಾಗುತ್ತಿದ್ದಂತೆ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ರಾಜ್ಯದಲ್ಲಿ ಈಗಾಗಲೇ ಡೆಂಗ್ಯು ಭೀತಿ ತಲೆದೂರಿದೆ. ಈ ಮಧ್ಯೆ ನಿಫಾ ವೈರಸ್​ ಆತಂಕವೂ ಹೆಚ್ಚಾಗಿದೆ. ಇನ್ನು ಕರ್ನಾಟಕದಲ್ಲಿ ನಿಫಾ ವೈರಸ್​ಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಕೇರಳಾದಿಂದ ಕರ್ನಾಟಕಕ್ಕೆ ದಿನನಿತ್ಯ ಸಂಚಾರ ಮಾಡುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.

ಲಕ್ಷಣಗಳು ಏನು..? ಮುಂಜಾಗ್ರತೆ ಏನು..? : ಈ ಸೋಂಕು ಬಾವಲಿ ಕಚ್ಚಿದ ಹಣ್ಣು ಸೇವನೆಯು ಈ ಸೋಂಕು ಹರಡುವಿಕೆಗೆ ಕಾರಣವಾಗಿದೆ. ಈ ಸೋಂಕು ಮಾನವರಲ್ಲಿ ಮೆದುಳಿನ ಉರಿಯೂತದೊಂದಿಗೆ ಮಾರಣಾಂತಿಕ ಜ್ವರಕ್ಕೆ ಕಾರಣವಾಗುತ್ತದೆ. ನಿಫಾ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು, ಉಸಿರಾಟ ಸಮಸ್ಯೆ, ಅತಿಸಾರ, ಆಯಾಸ, ವಾಂತಿ, ಸ್ನಾಯು ನೋವು ಮತ್ತು ಆಲಸ್ಯ. ಇನ್ನು ಕೆಲವರಲ್ಲಿ ಈ ಸೋಂಕಿನ ಲಕ್ಷಣಗಳು ಗೋಚರರಹಿತವಾಗಿರುತ್ತದೆ. ಸೋಂಕಿನಿಂದ ಸುರಕ್ಷೆ ಪಡೆಯಲು ಕೈಯ ಶುಚಿತ್ವ ಕಾಪಾಡುವುದು ಮುಖ್ಯ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

6 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

7 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

11 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago