Advertisement
MIRROR FOCUS

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ಗೆ ಓರ್ವ ಬಲಿ | ಕರ್ನಾಟಕದಲ್ಲಿ ಎಚ್ಚರ | ಗಡಿ ಭಾಗದಲ್ಲಿ ಪ್ರಯಾಣಿಕರ ಮೇಲೆ ನಿಗಾ | ನಿಫಾ ಲಕ್ಷಣ ಏನು..? ಮುಂಜಾಗ್ರತೆ ಏನು..?

Share

ಕರ್ನಾಟಕದಲ್ಲಿ ಡೆಂಗ್ಯು ಭೀತಿಯ ನಡುವೆ ಕೇರಳದಲ್ಲಿ ನಿಫಾ ವೈರಸ್‌ ಆತಂಕ ಎದುರಾಗಿದೆ.  ಕೇರಳದ ಮಲಪ್ಪುರಂನಲ್ಲಿ ನಿಫಾ ವೈರಸ್  ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.  ಈ ಬೆನ್ನಲ್ಲೇ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ (ಐಸಿಎಂಆರ್​) ತಂಡ ಕೋಯಿಕ್ಕೋಡ್​​ಗೆ ಆಗಮಿಸಿದೆ. ಬಾಲಕನ ಸಂಪರ್ಕದಲ್ಲಿದ್ದ 13 ಜನರ ಸೀರಮ್ ಪರೀಕ್ಷೆಯ ಫಲಿತಾಂಶಗಳಿಗಾಗಿ  ಕಾಯಲಾಗುತ್ತಿದೆ. 

ಭಾರತೀಯ ವೈದ್ಯಕೀಯ ಸಂಶೋಧನಾ (ಐಸಿಎಂಆರ್​) ತಂಡದಲ್ಲಿ ನಾಲ್ವರು ವೈದ್ಯರು ಮತ್ತು ಇಬ್ಬರು ತಂತ್ರಜ್ಞರು ಇದ್ದು, ಇವರು ಸೋಂಕಿತ ತಡೆ ವಿಧಾನ, ಪರೀಕ್ಷೆ ಸೌಲಭ್ಯ ಮತ್ತು ಚಿಕಿತ್ಸೆ ಪ್ರಕ್ರಿಯೆ ಕುರಿತು ರಾಜ್ಯ ಆರೋಗ್ಯ ಇಲಾಖೆ ಜೊತೆಗೆ ಕಾರ್ಯ ನಿರ್ವಹಿಸಲಿದ್ದಾರೆ. ಪ್ರಸ್ತತ, ಕೋಯಿಕ್ಕೋಡ್​ನ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿರುವ 68 ವರ್ಷದ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಸಂಶಯ ಎದುರಾಗಿದೆ. ಅವರ ಪ್ರಾಥಮಿಕ ಪರೀಕ್ಷೆಗಳಲ್ಲಿ ನೆಗೆಟಿವ್​ ಬಂದಿದ್ದು, ಐಸಿಯುನಲ್ಲಿರುವ ಅವರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. 350 ಜನರ ಸ್ಯಾಂಪಲ್‌ ತೆಗೆಯಲಾಗಿದೆ. ಈ  ಪೈಕಿ ನಾಲ್ವರು ತಿರುವನಂತಪುರಂ ಹಾಗೂ ಇಬ್ಬರು ಪಾಲಕ್ಕಾಡ್‌ನವರು.

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಹೆಚ್ಚಾಗಿದೆ. ಈಗಾಗಲೇ ರಾಜ್ಯದಲ್ಲಿ ಹೈ ಅಲರ್ಟ್​​ ಘೋಷಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್​ ಹೆಚ್ಚಾಗುತ್ತಿದ್ದಂತೆ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ರಾಜ್ಯದಲ್ಲಿ ಈಗಾಗಲೇ ಡೆಂಗ್ಯು ಭೀತಿ ತಲೆದೂರಿದೆ. ಈ ಮಧ್ಯೆ ನಿಫಾ ವೈರಸ್​ ಆತಂಕವೂ ಹೆಚ್ಚಾಗಿದೆ. ಇನ್ನು ಕರ್ನಾಟಕದಲ್ಲಿ ನಿಫಾ ವೈರಸ್​ಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಕೇರಳಾದಿಂದ ಕರ್ನಾಟಕಕ್ಕೆ ದಿನನಿತ್ಯ ಸಂಚಾರ ಮಾಡುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.

ಲಕ್ಷಣಗಳು ಏನು..? ಮುಂಜಾಗ್ರತೆ ಏನು..? : ಈ ಸೋಂಕು ಬಾವಲಿ ಕಚ್ಚಿದ ಹಣ್ಣು ಸೇವನೆಯು ಈ ಸೋಂಕು ಹರಡುವಿಕೆಗೆ ಕಾರಣವಾಗಿದೆ. ಈ ಸೋಂಕು ಮಾನವರಲ್ಲಿ ಮೆದುಳಿನ ಉರಿಯೂತದೊಂದಿಗೆ ಮಾರಣಾಂತಿಕ ಜ್ವರಕ್ಕೆ ಕಾರಣವಾಗುತ್ತದೆ. ನಿಫಾ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು, ಉಸಿರಾಟ ಸಮಸ್ಯೆ, ಅತಿಸಾರ, ಆಯಾಸ, ವಾಂತಿ, ಸ್ನಾಯು ನೋವು ಮತ್ತು ಆಲಸ್ಯ. ಇನ್ನು ಕೆಲವರಲ್ಲಿ ಈ ಸೋಂಕಿನ ಲಕ್ಷಣಗಳು ಗೋಚರರಹಿತವಾಗಿರುತ್ತದೆ. ಸೋಂಕಿನಿಂದ ಸುರಕ್ಷೆ ಪಡೆಯಲು ಕೈಯ ಶುಚಿತ್ವ ಕಾಪಾಡುವುದು ಮುಖ್ಯ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

19 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

20 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

20 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

20 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

20 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago