Advertisement
MIRROR FOCUS

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ರಾತ್ರಿ ಕರ್ಫ್ಯೂ | ಅಡಿಕೆ ಕಳ್ಳಸಾಗಾಣಿಕೆ ಮೇಲೆ ನಿಯಂತ್ರಣ ಸಾಧ್ಯತೆ |

Share

ಬಾಂಗ್ಲಾದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಯ ಅಪಾಯಗಳ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಭದ್ರತಾ ಕ್ರಮಗಳನ್ನು ಮೇಘಾಲಯದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಗುಗೊಳಿಸಲಾಗಿದ್ದು ರಾತ್ರಿ ಕರ್ಫ್ಯೂ ವಿಧಿಸಿದೆ. ಪ್ರತಿದಿನ ಸಂಜೆ 6 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮೇಘಾಲಯ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲಾಡಳಿತವು ಘೋಷಿಸಿತು. ಅಂತರರಾಷ್ಟ್ರೀಯ ಗಡಿಯ 200 ಮೀಟರ್ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.

ಗಡಿ ಪ್ರದೇಶಗಳು ಅಕ್ರಮ ಒಳನುಸುಳುವಿಕೆ, ದಂಗೆಕೋರರ ಚಲನೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳಿಗೆ, ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಅವಕಾಶವಾಗುತ್ತಿದೆ. ಹೀಗಾಗಿ ಭದ್ರತಾ ಕ್ರಮಗಳನ್ನು ಅನುಸರಿಸಿ ಈ ನಿರ್ದೇಶನ ನೀಡಲಾಗಿದೆ. ಭಾರತ ಅಥವಾ ಬಾಂಗ್ಲಾದೇಶಕ್ಕೆ ಅಕ್ರಮ ಪ್ರವೇಶಕ್ಕಾಗಿ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಸಂಚಾರ,  ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಅನಧಿಕೃತವಾಗಿ ಸೇರುವುದು, ಗಡಿಯ ಬಳಿ ಕೋಲುಗಳು, ರಾಡ್‌ಗಳು, ಕಲ್ಲುಗಳು ಅಥವಾ ಇತರ  ಆಯುಧಗಳನ್ನು ಸಾಗಿಸುವುದು, ನಿಷಿದ್ಧ ಸರಕುಗಳು, ಅಡಿಕೆ, ಮೀನು, ಒಣ ಮೀನು, ಸಿಗರೇಟ್ ಮತ್ತು ಇತರ  ವಸ್ತುಗಳ ಕಳ್ಳಸಾಗಣೆಯನ್ನು ಕರ್ಫ್ಯೂ ನಿಷೇಧಿಸುತ್ತದೆ ಎಂದು ಅಲ್ಲಿನ ಪ್ರಕಟಣೆ ಹೇಳಿದೆ.

ಈಗಾಗಲೇ ಕಳ್ಳದಾರಿಯ ಮೂಲಕ ಬಾಂಗ್ಲಾದೇಶದಿಂದ ಬರುತ್ತಿರುವ ಅಡಿಕೆಯ ಮೇಲೆ ನಿರ್ಬಂಧ ಸಾಧ್ಯವಿದೆ. ಅಡಿಕೆ ಕಳ್ಳಸಾಗಾಣಿಕೆಯು ಮೇಘಾಲಯ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಭಾರತದೊಳಕ್ಕೆ ಬರುತ್ತಿತ್ತು. ಈಚೆಗಷ್ಟೆ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಕಳ್ಳ ಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿತ್ತು.  ಇದೀಗ ರಾತ್ರಿ ಕರ್ಫ್ಯೂ ಅಡಿಕೆ ಕಳ್ಳಸಾಗಾಣಿಕೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಭಾರತದ ಅಡಿಕೆ ಮಾರುಕಟ್ಟೆ ಮೇಲೂ ಉತ್ತಮ ಪರಿಣಾಮ ಬೀರುವ ಸಾಧ್ಯತೆ ಇದೆ. ಹೊಸ ಅಡಿಕೆ ಧಾರಣೆ ಏರಿಕೆಗೂ ಕಾರಣವಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

(ಯು ಎನ್‌ ಐ)

The curfew prohibits movement across the Illegal activities, including smuggling of cattle, contraband goods, Arecanut, betel leaves, fish, dry fish, cigarettes, bidis, and other prohibited items…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

7 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago