MIRROR FOCUS

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

Advertisement

ಪ್ರಸ್ತುತ, ಸಂಪರ್ಕ ಪಟ್ಟಿಯಲ್ಲಿ 461 ಜನರಿದ್ದಾರೆ. ಪಾಲಕ್ಕಾಡ್ ಜಿಲ್ಲೆಯಲ್ಲಿ, ಒಬ್ಬ ವ್ಯಕ್ತಿಗೆ ಮಾತ್ರ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಲಪ್ಪುರಂನಲ್ಲಿ, ಸಂಪರ್ಕ ಪಟ್ಟಿಯಲ್ಲಿರುವವರಿಂದ ಸಂಗ್ರಹಿಸಲಾದ 48 ಮಾದರಿಗಳಲ್ಲಿ 46 ಮಾದರಿಗಳು ನೆಗೆಟಿವ್‌ ವರದಿ ಬಂದಿದೆ ಎಂದು ಸಚಿವರು ಮಾಹಿತಿ ನೀಡಿದರು. ನಿಪಾ ಪ್ರಕರಣಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ತಜ್ಞರ ತಂಡವು ಬಾವಲಿಗಳು ವಾಸಿಸುವ ಪ್ರದೇಶಗಳಿಗೆ ಭೇಟಿ ನೀಡಿ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಲು ರಾಜ್ಯಕ್ಕೆ ಆಗಮಿಸಲಿದೆ.

ಮಲಪ್ಪುರಂ ಜಿಲ್ಲೆಯಲ್ಲಿ ನಿಪಾ ವೈರಸ್ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ, ವಯನಾಡಿನಲ್ಲೂ ಹೆಚ್ಚಿನ ಜಾಗರೂಕತೆ ವಹಿಸುವಂತೆ ವಯನಾಡಿನ ಜಿಲ್ಲಾ ವೈದ್ಯಾಧಿಕಾರಿ ಎಚ್ಚರಿಸಿದ್ದಾರೆ. ಹಿಂದಿನ ವರ್ಷ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಜಿಲ್ಲೆಯ ಹಣ್ಣು ಬಾವಲಿಗಳ ಸಂಖ್ಯೆಯಲ್ಲಿ ನಡೆಸಿದ ಮಾದರಿ ಪರೀಕ್ಷೆಯಲ್ಲಿ ನಿಪಾ ವೈರಸ್ ವಿರುದ್ಧ ಪ್ರತಿಬಂಧಕಗಳು ಪತ್ತೆಯಾಗಿವೆ ಎಂದು ಅವರು ಹೇಳಿದರು. ಹಣ್ಣು ಬಾವಲಿಗಳ ಸಂತಾನೋತ್ಪತ್ತಿ ಕಾಲವು ನಿಪಾ ಹರಡುವಿಕೆಯ ಸಾಧ್ಯತೆಯನ್ನು ಹೆಚ್ಚಿಸುವುದರಿಂದ, ಎಲ್ಲಾ ಆರೋಗ್ಯ ಕೇಂದ್ರಗಳು ಜಾಗರೂಕತೆಯನ್ನು ಕಾಪಾಡಿಕೊಳ್ಳಲು, ರೋಗದ ಲಕ್ಷಣಗಳನ್ನು  ಮೇಲ್ವಿಚಾರಣೆ ಮಾಡಲು ಮತ್ತು ಯಾವುದೇ ಶಂಕಿತ ಪ್ರಕರಣಗಳನ್ನು ತಕ್ಷಣ ವರದಿ ಮಾಡಲು ಸೂಚಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

3 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

3 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

3 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

4 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

11 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

12 hours ago