Advertisement
MIRROR FOCUS

#NipahVirus | ನಿಫಾ ವೈರಸ್‌ ಸೋಂಕು | ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಕೇರಳ ಸರ್ಕಾರ | ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆ | ರೋಗಿಗಳ ಸಂಪರ್ಕದಲ್ಲಿದ್ದ 77 ಜನರಿಗೆ ಅಪಾಯ |

Share

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸರ್ಕಾರವು ಗುರುವಾರ ಮತ್ತು ಶುಕ್ರವಾರದಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಕೇರಳದಲ್ಲಿ ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣ ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿದೆ. ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಕಂಟೈನ್‌ಮೆಂಟ್ ವಲಯಗಳನ್ನು ರಚಿಸಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ರೋಗಿಗಳ ಸಂಪರ್ಕಕ್ಕೆ ಬಂದ 153 ಆರೋಗ್ಯ ಕಾರ್ಯಕರ್ತರು ಸೇರಿದಂತೆ ಸುಮಾರು 706 ಜನರ ಪಟ್ಟಿಯನ್ನು ತಯಾರಿಸಲಾಗಿದೆ. ಈ ಪೈಕಿ 77 ಜನರನ್ನು ಹೈ ರಿಸ್ಕ್ ವಿಭಾಗದಲ್ಲಿ ಇರಿಸಲಾಗಿದೆ.

ನಿಫಾ ವೈರಸ್​ನಿಂದ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ, ರಾಜ್ಯಾದ್ಯಂತ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ. ಸೋಂಕು ತಡೆಗೆ ರಾಜ್ಯ ಹಲವು ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ಅಪಾಯದ ವರ್ಗದಲ್ಲಿರುವ ಜನರು ತಮ್ಮ ಮನೆಯಿಂದ ಹೊರಬರದಂತೆ ಮನವಿ ಮಾಡಲಾಗಿದೆ.

ಕೋಯಿಕ್ಕೋಡ್ ಜಿಲ್ಲೆಯಲ್ಲಿ ಸಾರ್ವಜನಿಕ ಉತ್ಸವಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕೋಝಿಕ್ಕೋಡ್ ಜಿಲ್ಲೆಯ ವಡಕರ ತಾಲೂಕಿನ 9 ಪಂಚಾಯತ್‌ಗಳ 58 ವಾರ್ಡ್‌ಗಳನ್ನು ಕಂಟೈನ್‌ಮೆಂಟ್ ವಲಯಗಳನ್ನಾಗಿ ಮಾಡಲಾಗಿದೆ. ಇಲ್ಲಿ ತುರ್ತು ಸೇವೆಗಳನ್ನು ಮಾತ್ರ ಅನುಮತಿಸಲಾಗಿದೆ. ತುರ್ತು ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಬೆಳಿಗ್ಗೆ 7ಗಂಟೆಯಿಂದ ರಿಂದ ಸಂಜೆ 5ರವರೆಗೆ ತೆರೆಯಲು ಅನುಮತಿಸಲಾಗಿದೆ.

ಔಷಧಾಲಯಗಳು ಮತ್ತು ಆರೋಗ್ಯ ಕೇಂದ್ರಗಳಿಗೆ ಯಾವುದೇ ಸಮಯದ ಮಿತಿಯಿಲ್ಲ. ಕಂಟೈನ್‌ಮೆಂಟ್ ಝೋನ್‌ನಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗಳು ನಿಲ್ಲದಂತೆ ಕೇಳಿಕೊಳ್ಳಲಾಗಿದೆ. 9 ವರ್ಷದ ಬಾಲಕ ನಿಫಾ ವೈರಸ್​ನಿಂದ ಬಳಲುತ್ತಿದ್ದು, ವೆಂಟಿಲೇಟರ್ ನಲ್ಲಿರಿಸಲಾಗಿದೆ.

ಈ ಬಾರಿ ಕೋಝಿಕ್ಕೋಡ್‌ನಲ್ಲಿ ಏಕಾಏಕಿ ಈ ವೈರಸ್‌ ಹರಡಿದ್ದು, ಡಬ್ಲ್ಯುಎಚ್‌ಒ ಮತ್ತು ಐಸಿಎಂಆರ್ ಅಧ್ಯಯನಗಳ ಪ್ರಕಾರ ಇಡೀ ಕೇರಳವು ಇಂತಹ ಸೋಂಕುಗಳಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಈ ಬಾರಿ ಕೇರಳದಲ್ಲಿ ಹರಡಿರುವ ನಿಫಾ ಸೋಂಕು ಬಾಂಗ್ಲಾದೇಶದ ತಳಿಯಾಗಿದೆ. ಇದರ ಸೋಂಕಿನ ಪ್ರಮಾಣ ಕಡಿಮೆ, ಆದರೆ ಸಾವಿನ ಪ್ರಮಾಣ ಹೆಚ್ಚು. ವೈರಸ್ ಸೋಂಕು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ಕೇರಳದ ಪರಿಸ್ಥಿತಿಯ ಮೇಲೆ ನಿಗಾ ಇಡಲು ಕೇಂದ್ರ ಸರ್ಕಾರ ಐವರು ತಜ್ಞರ ತಂಡವನ್ನು ಧಾವಿಸಿದೆ.  ಮಂಗಳವಾರ, ಕೋಝಿಕ್ಕೋಡ್‌ನಲ್ಲಿ ನಿಫಾ ಸೋಂಕು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಇಲಾಖೆ ಕಣ್ಣೂರು, ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.

2018ರಲ್ಲಿ ಕೇರಳದಲ್ಲಿ ನಿಫಾ ಸೋಂಕು ಮೊದಲ ಬಾರಿಗೆ ಹರಡಿತ್ತು. 2018 ರಿಂದ ಕೇರಳದ ನಾಲ್ಕನೇ ಬಾರಿ ಈ ವೈರಸ್‌ನಲ್ಲಿ ಆಗಸ್ಟ್ 30 ರಿಂದ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಇದೀಗ ಆ ರಾಜ್ಯದಲ್ಲಿ ಮತ್ತೊಮ್ಮೆ ಸೋಂಕು ಹರಡುವ ಭೀತಿಯ ವಾತಾವರಣ ನಿರ್ಮಾಣವಾಗಿದೆ. ನಂತರ, 2019 ಮತ್ತು 2021 ರಲ್ಲಿ, ಸೋಂಕಿತ ರೋಗಿಗಳು ವರದಿಯಾಯಿತು.

Source : Agencies

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

6 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago