Advertisement
MIRROR FOCUS

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

Share

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ದೃಢಪಟ್ಟ ಮೂರು ನಿಪಾ ಪ್ರಕರಣಗಳ ನಂತರವೂ ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದಲ್ಲಿ ಹರಡುವಿಕೆಯ ಅಪಾಯ ಕಡಿಮೆ ಎಂದು ನಿರ್ಣಯಿಸಲಾಗಿದೆ ಎಂದು WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಹೇಳಿದ್ದಾರೆ.

ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಕೆಲವು ವಾರಗಳಲ್ಲಿ ಭಾರತದಲ್ಲಿ ಎರಡು ಮತ್ತು ಬಾಂಗ್ಲಾದೇಶದಲ್ಲಿ ಒಂದು ಪ್ರಕರಣ ದೃಢಪಟ್ಟಿದ್ದು, ಏಕಾಏಕಿ ಹರಡುವಿಕೆಯ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಆದರೆ ಮೌಲ್ಯಮಾಪನದ ಬಳಿಕ ಅಪಾಯ ಕಡಿಮೆ ಎಂದು ಕಂಡುಬಂದಿದೆ,” ಎಂದರು. ಭಾರತದಲ್ಲಿ ಕಳೆದ ತಿಂಗಳು ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಕರಣಗಳು ದೃಢಪಟ್ಟವು. ಕಳೆದ ವಾರ ಬಾಂಗ್ಲಾದೇಶದಲ್ಲಿ ಒಬ್ಬ ರೋಗಿ ಮೃತಪಟ್ಟಿದ್ದಾರೆ.  ಎರಡೂ ಪ್ರಕರಣಗಳು ಭಾರತ–ಬಾಂಗ್ಲಾದೇಶ ಗಡಿಯ ಸಮೀಪದಲ್ಲೇ ಸಂಭವಿಸಿದ್ದರೂ, ಪರಸ್ಪರ ಸಂಬಂಧಿಸಿಲ್ಲ ಎಂದು WHO ಸ್ಪಷ್ಟಪಡಿಸಿದೆ. ಈ ಪ್ರದೇಶಗಳಲ್ಲಿ ನಿಪಾ ವೈರಸ್‌ನ ನೈಸರ್ಗಿಕ ವಲಯ ಪರಿಗಣಿಸಲ್ಪಡುವ ಹಣ್ಣಿನ ಬಾವಲಿ ಜಾತಿ (Fruit bats) ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತವೆ.

ನಿಪಾ ವೈರಸ್ ಏನು: ಎಷ್ಟು ಅಪಾಯಕಾರಿ? : ನಿಪಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್ ಆಗಿದ್ದು, ಯಾವುದೇ ಲಸಿಕೆ ಇಲ್ಲ. ಮರಣ ಪ್ರಮಾಣ: 40% ರಿಂದ 75% ಆಗಿರುತ್ತದೆ.  ರೋಗಲಕ್ಷಣಗಳಲ್ಲಿ ತೀವ್ರ ಜ್ವರ, ವಾಂತಿ, ಉಸಿರಾಟದ ತೊಂದರೆ ಇರುತ್ತದೆ.  ತೀವ್ರ ಪ್ರಕರಣಗಳಲ್ಲಿ: ಮೆದುಳಿನ ಉರಿಯೂತ, ಕೋಮಾ ಕೂಡಾ ಆಗುತ್ತದೆ. 1998 ರಲ್ಲಿ ಮಲೇಷ್ಯಾದ ಹಂದಿ ಸಾಕಾಣಿಕೆಯಲ್ಲಿ ಮೊದಲಿಗೆ ನಿಪಾ ಪತ್ತೆಯಾಗಿದೆ. ಭಾರತದಲ್ಲಿ ಮೊದಲ ಪ್ರಕರಣ – ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗುದೆ. 2018 ರಲ್ಲಿ ಕೇರಳದಲ್ಲಿ ಕನಿಷ್ಠ 17 ಸಾವುಗಳು ಸಂಭವಿಸಿದೆ. 2023  ರಲ್ಲಿ ಕೂಡಾ ಕೇರಳದಲ್ಲಿ ಮತ್ತೆ 2 ಸಾವುಗಳು ಸಂಭವಿಸಿದೆ.

WHO ಪ್ರಕಾರ, ಸದ್ಯದ ಪರಿಸ್ಥಿತಿ ನಿಯಂತ್ರಣದಲ್ಲಿ ಇದ್ದರೂ, ಗಡಿಯ ಪ್ರದೇಶಗಳಲ್ಲಿ ಆರೋಗ್ಯ ನಿಗಾ, ಬಾವಲಿ ಸಂಪರ್ಕ ಕಡಿತ, ರೋಗಲಕ್ಷಣ ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ಪರೀಕ್ಷೆ ಅತ್ಯಂತ ಅಗತ್ಯ ಎಂದು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

4 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

11 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

13 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

14 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago