Advertisement
MIRROR FOCUS

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

Share

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ದೃಢಪಟ್ಟ ಮೂರು ನಿಪಾ ಪ್ರಕರಣಗಳ ನಂತರವೂ ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದಲ್ಲಿ ಹರಡುವಿಕೆಯ ಅಪಾಯ ಕಡಿಮೆ ಎಂದು ನಿರ್ಣಯಿಸಲಾಗಿದೆ ಎಂದು WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಹೇಳಿದ್ದಾರೆ.

Advertisement

ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಕೆಲವು ವಾರಗಳಲ್ಲಿ ಭಾರತದಲ್ಲಿ ಎರಡು ಮತ್ತು ಬಾಂಗ್ಲಾದೇಶದಲ್ಲಿ ಒಂದು ಪ್ರಕರಣ ದೃಢಪಟ್ಟಿದ್ದು, ಏಕಾಏಕಿ ಹರಡುವಿಕೆಯ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಆದರೆ ಮೌಲ್ಯಮಾಪನದ ಬಳಿಕ ಅಪಾಯ ಕಡಿಮೆ ಎಂದು ಕಂಡುಬಂದಿದೆ,” ಎಂದರು. ಭಾರತದಲ್ಲಿ ಕಳೆದ ತಿಂಗಳು ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಕರಣಗಳು ದೃಢಪಟ್ಟವು. ಕಳೆದ ವಾರ ಬಾಂಗ್ಲಾದೇಶದಲ್ಲಿ ಒಬ್ಬ ರೋಗಿ ಮೃತಪಟ್ಟಿದ್ದಾರೆ.  ಎರಡೂ ಪ್ರಕರಣಗಳು ಭಾರತ–ಬಾಂಗ್ಲಾದೇಶ ಗಡಿಯ ಸಮೀಪದಲ್ಲೇ ಸಂಭವಿಸಿದ್ದರೂ, ಪರಸ್ಪರ ಸಂಬಂಧಿಸಿಲ್ಲ ಎಂದು WHO ಸ್ಪಷ್ಟಪಡಿಸಿದೆ. ಈ ಪ್ರದೇಶಗಳಲ್ಲಿ ನಿಪಾ ವೈರಸ್‌ನ ನೈಸರ್ಗಿಕ ವಲಯ ಪರಿಗಣಿಸಲ್ಪಡುವ ಹಣ್ಣಿನ ಬಾವಲಿ ಜಾತಿ (Fruit bats) ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತವೆ.

ನಿಪಾ ವೈರಸ್ ಏನು: ಎಷ್ಟು ಅಪಾಯಕಾರಿ? : ನಿಪಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್ ಆಗಿದ್ದು, ಯಾವುದೇ ಲಸಿಕೆ ಇಲ್ಲ. ಮರಣ ಪ್ರಮಾಣ: 40% ರಿಂದ 75% ಆಗಿರುತ್ತದೆ.  ರೋಗಲಕ್ಷಣಗಳಲ್ಲಿ ತೀವ್ರ ಜ್ವರ, ವಾಂತಿ, ಉಸಿರಾಟದ ತೊಂದರೆ ಇರುತ್ತದೆ.  ತೀವ್ರ ಪ್ರಕರಣಗಳಲ್ಲಿ: ಮೆದುಳಿನ ಉರಿಯೂತ, ಕೋಮಾ ಕೂಡಾ ಆಗುತ್ತದೆ. 1998 ರಲ್ಲಿ ಮಲೇಷ್ಯಾದ ಹಂದಿ ಸಾಕಾಣಿಕೆಯಲ್ಲಿ ಮೊದಲಿಗೆ ನಿಪಾ ಪತ್ತೆಯಾಗಿದೆ. ಭಾರತದಲ್ಲಿ ಮೊದಲ ಪ್ರಕರಣ – ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗುದೆ. 2018 ರಲ್ಲಿ ಕೇರಳದಲ್ಲಿ ಕನಿಷ್ಠ 17 ಸಾವುಗಳು ಸಂಭವಿಸಿದೆ. 2023  ರಲ್ಲಿ ಕೂಡಾ ಕೇರಳದಲ್ಲಿ ಮತ್ತೆ 2 ಸಾವುಗಳು ಸಂಭವಿಸಿದೆ.

WHO ಪ್ರಕಾರ, ಸದ್ಯದ ಪರಿಸ್ಥಿತಿ ನಿಯಂತ್ರಣದಲ್ಲಿ ಇದ್ದರೂ, ಗಡಿಯ ಪ್ರದೇಶಗಳಲ್ಲಿ ಆರೋಗ್ಯ ನಿಗಾ, ಬಾವಲಿ ಸಂಪರ್ಕ ಕಡಿತ, ರೋಗಲಕ್ಷಣ ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ಪರೀಕ್ಷೆ ಅತ್ಯಂತ ಅಗತ್ಯ ಎಂದು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

6 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

14 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

21 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago