Advertisement
MIRROR FOCUS

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

Share

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ದೃಢಪಟ್ಟ ಮೂರು ನಿಪಾ ಪ್ರಕರಣಗಳ ನಂತರವೂ ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದಲ್ಲಿ ಹರಡುವಿಕೆಯ ಅಪಾಯ ಕಡಿಮೆ ಎಂದು ನಿರ್ಣಯಿಸಲಾಗಿದೆ ಎಂದು WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಹೇಳಿದ್ದಾರೆ.

ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಕೆಲವು ವಾರಗಳಲ್ಲಿ ಭಾರತದಲ್ಲಿ ಎರಡು ಮತ್ತು ಬಾಂಗ್ಲಾದೇಶದಲ್ಲಿ ಒಂದು ಪ್ರಕರಣ ದೃಢಪಟ್ಟಿದ್ದು, ಏಕಾಏಕಿ ಹರಡುವಿಕೆಯ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಆದರೆ ಮೌಲ್ಯಮಾಪನದ ಬಳಿಕ ಅಪಾಯ ಕಡಿಮೆ ಎಂದು ಕಂಡುಬಂದಿದೆ,” ಎಂದರು. ಭಾರತದಲ್ಲಿ ಕಳೆದ ತಿಂಗಳು ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಕರಣಗಳು ದೃಢಪಟ್ಟವು. ಕಳೆದ ವಾರ ಬಾಂಗ್ಲಾದೇಶದಲ್ಲಿ ಒಬ್ಬ ರೋಗಿ ಮೃತಪಟ್ಟಿದ್ದಾರೆ.  ಎರಡೂ ಪ್ರಕರಣಗಳು ಭಾರತ–ಬಾಂಗ್ಲಾದೇಶ ಗಡಿಯ ಸಮೀಪದಲ್ಲೇ ಸಂಭವಿಸಿದ್ದರೂ, ಪರಸ್ಪರ ಸಂಬಂಧಿಸಿಲ್ಲ ಎಂದು WHO ಸ್ಪಷ್ಟಪಡಿಸಿದೆ. ಈ ಪ್ರದೇಶಗಳಲ್ಲಿ ನಿಪಾ ವೈರಸ್‌ನ ನೈಸರ್ಗಿಕ ವಲಯ ಪರಿಗಣಿಸಲ್ಪಡುವ ಹಣ್ಣಿನ ಬಾವಲಿ ಜಾತಿ (Fruit bats) ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತವೆ.

ನಿಪಾ ವೈರಸ್ ಏನು: ಎಷ್ಟು ಅಪಾಯಕಾರಿ? : ನಿಪಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್ ಆಗಿದ್ದು, ಯಾವುದೇ ಲಸಿಕೆ ಇಲ್ಲ. ಮರಣ ಪ್ರಮಾಣ: 40% ರಿಂದ 75% ಆಗಿರುತ್ತದೆ.  ರೋಗಲಕ್ಷಣಗಳಲ್ಲಿ ತೀವ್ರ ಜ್ವರ, ವಾಂತಿ, ಉಸಿರಾಟದ ತೊಂದರೆ ಇರುತ್ತದೆ.  ತೀವ್ರ ಪ್ರಕರಣಗಳಲ್ಲಿ: ಮೆದುಳಿನ ಉರಿಯೂತ, ಕೋಮಾ ಕೂಡಾ ಆಗುತ್ತದೆ. 1998 ರಲ್ಲಿ ಮಲೇಷ್ಯಾದ ಹಂದಿ ಸಾಕಾಣಿಕೆಯಲ್ಲಿ ಮೊದಲಿಗೆ ನಿಪಾ ಪತ್ತೆಯಾಗಿದೆ. ಭಾರತದಲ್ಲಿ ಮೊದಲ ಪ್ರಕರಣ – ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗುದೆ. 2018 ರಲ್ಲಿ ಕೇರಳದಲ್ಲಿ ಕನಿಷ್ಠ 17 ಸಾವುಗಳು ಸಂಭವಿಸಿದೆ. 2023  ರಲ್ಲಿ ಕೂಡಾ ಕೇರಳದಲ್ಲಿ ಮತ್ತೆ 2 ಸಾವುಗಳು ಸಂಭವಿಸಿದೆ.

WHO ಪ್ರಕಾರ, ಸದ್ಯದ ಪರಿಸ್ಥಿತಿ ನಿಯಂತ್ರಣದಲ್ಲಿ ಇದ್ದರೂ, ಗಡಿಯ ಪ್ರದೇಶಗಳಲ್ಲಿ ಆರೋಗ್ಯ ನಿಗಾ, ಬಾವಲಿ ಸಂಪರ್ಕ ಕಡಿತ, ರೋಗಲಕ್ಷಣ ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ಪರೀಕ್ಷೆ ಅತ್ಯಂತ ಅಗತ್ಯ ಎಂದು ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

3 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

11 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

20 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

1 day ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

1 day ago