Advertisement
MIRROR FOCUS

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

Share

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ದೃಢಪಟ್ಟ ಮೂರು ನಿಪಾ ಪ್ರಕರಣಗಳ ನಂತರವೂ ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದಲ್ಲಿ ಹರಡುವಿಕೆಯ ಅಪಾಯ ಕಡಿಮೆ ಎಂದು ನಿರ್ಣಯಿಸಲಾಗಿದೆ ಎಂದು WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಹೇಳಿದ್ದಾರೆ.

ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಕೆಲವು ವಾರಗಳಲ್ಲಿ ಭಾರತದಲ್ಲಿ ಎರಡು ಮತ್ತು ಬಾಂಗ್ಲಾದೇಶದಲ್ಲಿ ಒಂದು ಪ್ರಕರಣ ದೃಢಪಟ್ಟಿದ್ದು, ಏಕಾಏಕಿ ಹರಡುವಿಕೆಯ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಆದರೆ ಮೌಲ್ಯಮಾಪನದ ಬಳಿಕ ಅಪಾಯ ಕಡಿಮೆ ಎಂದು ಕಂಡುಬಂದಿದೆ,” ಎಂದರು. ಭಾರತದಲ್ಲಿ ಕಳೆದ ತಿಂಗಳು ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಕರಣಗಳು ದೃಢಪಟ್ಟವು. ಕಳೆದ ವಾರ ಬಾಂಗ್ಲಾದೇಶದಲ್ಲಿ ಒಬ್ಬ ರೋಗಿ ಮೃತಪಟ್ಟಿದ್ದಾರೆ.  ಎರಡೂ ಪ್ರಕರಣಗಳು ಭಾರತ–ಬಾಂಗ್ಲಾದೇಶ ಗಡಿಯ ಸಮೀಪದಲ್ಲೇ ಸಂಭವಿಸಿದ್ದರೂ, ಪರಸ್ಪರ ಸಂಬಂಧಿಸಿಲ್ಲ ಎಂದು WHO ಸ್ಪಷ್ಟಪಡಿಸಿದೆ. ಈ ಪ್ರದೇಶಗಳಲ್ಲಿ ನಿಪಾ ವೈರಸ್‌ನ ನೈಸರ್ಗಿಕ ವಲಯ ಪರಿಗಣಿಸಲ್ಪಡುವ ಹಣ್ಣಿನ ಬಾವಲಿ ಜಾತಿ (Fruit bats) ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತವೆ.

ನಿಪಾ ವೈರಸ್ ಏನು: ಎಷ್ಟು ಅಪಾಯಕಾರಿ? : ನಿಪಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್ ಆಗಿದ್ದು, ಯಾವುದೇ ಲಸಿಕೆ ಇಲ್ಲ. ಮರಣ ಪ್ರಮಾಣ: 40% ರಿಂದ 75% ಆಗಿರುತ್ತದೆ.  ರೋಗಲಕ್ಷಣಗಳಲ್ಲಿ ತೀವ್ರ ಜ್ವರ, ವಾಂತಿ, ಉಸಿರಾಟದ ತೊಂದರೆ ಇರುತ್ತದೆ.  ತೀವ್ರ ಪ್ರಕರಣಗಳಲ್ಲಿ: ಮೆದುಳಿನ ಉರಿಯೂತ, ಕೋಮಾ ಕೂಡಾ ಆಗುತ್ತದೆ. 1998 ರಲ್ಲಿ ಮಲೇಷ್ಯಾದ ಹಂದಿ ಸಾಕಾಣಿಕೆಯಲ್ಲಿ ಮೊದಲಿಗೆ ನಿಪಾ ಪತ್ತೆಯಾಗಿದೆ. ಭಾರತದಲ್ಲಿ ಮೊದಲ ಪ್ರಕರಣ – ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗುದೆ. 2018 ರಲ್ಲಿ ಕೇರಳದಲ್ಲಿ ಕನಿಷ್ಠ 17 ಸಾವುಗಳು ಸಂಭವಿಸಿದೆ. 2023  ರಲ್ಲಿ ಕೂಡಾ ಕೇರಳದಲ್ಲಿ ಮತ್ತೆ 2 ಸಾವುಗಳು ಸಂಭವಿಸಿದೆ.

WHO ಪ್ರಕಾರ, ಸದ್ಯದ ಪರಿಸ್ಥಿತಿ ನಿಯಂತ್ರಣದಲ್ಲಿ ಇದ್ದರೂ, ಗಡಿಯ ಪ್ರದೇಶಗಳಲ್ಲಿ ಆರೋಗ್ಯ ನಿಗಾ, ಬಾವಲಿ ಸಂಪರ್ಕ ಕಡಿತ, ರೋಗಲಕ್ಷಣ ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ಪರೀಕ್ಷೆ ಅತ್ಯಂತ ಅಗತ್ಯ ಎಂದು ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

11 minutes ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

1 hour ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

3 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

4 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

11 hours ago