ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ | ಶೃಂಗೇರಿಯಿಂದ ಶ್ರೀಶೈಲದವರೆಗೆ |

November 13, 2024
2:49 PM

ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ ಹಮ್ಮಿಕೊಂಡಿರುವ ನಿರ್ಮಲ ತುಂಗಾಭದ್ರ ಅಭಿಯಾನ ಪಾದಯಾತ್ರೆ ಶಿವಮೊಗ್ಗ ಜಿಲ್ಲೆ ತಲುಪಿದ್ದು, ಕಾರ್ಯಕ್ರಮಕ್ಕೆ ಕೂಡ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತೀಯ ಸ್ವಾಮೀಜಿ ಚಾಲನೆ ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ಅಭಿನವ ಶಂಕರ ಭಾರತೀಯ ಸ್ವಾಮೀಜಿ, ಮನುಷ್ಯನಾಗಿ ಬದುಕಬೇಕಾದರೆ ಹಲವಾರು ಋಣಗಳಿಗೆ ಋಣಿಯಾಗಿರಬೇಕಾಗುತ್ತದೆ. ಸಮಾಜದಿಂದ ಏನನ್ನು ಪಡೆದಿದ್ದೇವೆ ಅದಕ್ಕಿಂತಲೂ ಹೆಚ್ಚಿಗೆ ಸಮಾಜಕ್ಕೆ ಹಿಂದುರುಗಿಸಬೇಕು ಎಂದರು.

ಪರಿಸರವಾದಿ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ತುಂಗಾ ತಡದಲ್ಲಿ ಜನಜಾಗೃತಿಗಾಗಿ ತುಂಗಾ ನದಿಗೆ ವಿಶೇಷ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪರಿಸರವಾದಿ ಕುಮಾರಸ್ವಾಮಿ, ಇತ್ತೀಚಿಗೆ ತ್ಯಾಜ್ಯದ ಸಮಸ್ಯೆ ಹೆಚ್ಚಾಗಿದ್ದು, ಪರಿಸರದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ ಎಂದರು. ಪಾದಯಾತ್ರಿ ಬಾಲಕೃಷ್ಣ ನಾಯ್ಡು, ಎಲ್ಲಾ ನದಿಗಳು ಪೂಜ್ಯನೀಯವಾಗಿವೆ ಜನರು ಈ ನದಿಗಳ ಮಹತ್ವವನ್ನು ಅರಿತುಕೊಂಡು ನದಿಗಳ ಸಂರಕ್ಷಣೆಯಲ್ಲಿ ಮುಂದಾಗಬೇಕು.ನದಿಗಳು ಮತ್ತು ಅರಣ್ಯಗಳೊಂದಿಗೆ ಜನರು ಭಾವನಾತ್ಮಕವಾಗಿ ವರ್ತಿಸುತ್ತಾರೆ ನದಿ ಉಗಮ ಸ್ಥಾನದಿಂದಲೇ ಶುದ್ದೀಕರಣದ ಕಡೆಗೆ ಗಮನ ಹರಿಸುವಂಥ ಕಾರ್ಯಕ್ರಮ ಇದಾಗಿದೆ ಎಂದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು
June 23, 2025
7:56 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group